Home Uncategorized ವೀಕೆಂಟ್ ಟ್ರಿಪ್ ಗೆ ಹೋಗಿದ್ದ ಬೆಂಗಳೂರಿನ ಇಬ್ಬರು ಯುವತಿ, ಓರ್ವ ಯುವಕ ನೀರುಪಾಲು

ವೀಕೆಂಟ್ ಟ್ರಿಪ್ ಗೆ ಹೋಗಿದ್ದ ಬೆಂಗಳೂರಿನ ಇಬ್ಬರು ಯುವತಿ, ಓರ್ವ ಯುವಕ ನೀರುಪಾಲು

33
0

ವೀಕೆಂಟ್ ಟ್ರಿಪ್ ಗೆ ತೆರಳಿದ್ದ ಬೆಂಗಳೂರಿನ ಇಬ್ಬರು ಯುವತಿಯವರು ಹಾಗೂ ಓರ್ವ ಯುವಕ ಚಿಕ್ಕಬಳ್ಳಾಪುರದ ಶ್ರೀನಿವಾಸ ಸಾಗರ ಡ್ಯಾಂನಲ್ಲಿ ಮುಳುಗಿ ಸಾವನ್ನಪ್ಪಿರುವ ದಾರುಣ ಘಟನೆ ಶನಿವಾರ ನಡೆದಿದೆ. ಚಿಕ್ಕಬಳ್ಳಾಪುರ: ವೀಕೆಂಟ್ ಟ್ರಿಪ್ ಗೆ ತೆರಳಿದ್ದ ಬೆಂಗಳೂರಿನ ಇಬ್ಬರು ಯುವತಿಯವರು ಹಾಗೂ ಓರ್ವ ಯುವಕ ಚಿಕ್ಕಬಳ್ಳಾಪುರದ ಶ್ರೀನಿವಾಸ ಸಾಗರ ಡ್ಯಾಂನಲ್ಲಿ ಮುಳುಗಿ ಸಾವನ್ನಪ್ಪಿರುವ ದಾರುಣ ಘಟನೆ ಶನಿವಾರ ನಡೆದಿದೆ.

ಒಟ್ಟು 6 ವಿದ್ಯಾರ್ಥಿಗಳು ಇಂದು ಬೆಂಗಳೂರಿನಿಂದ ಶ್ರೀನಿವಾಸ ಸಾಗರ ಡ್ಯಾಂ ಟ್ರಿಪ್ ಗೆ ಹೋಗಿದ್ದು, ಈ ವೇಳೆ ಈಜಲು ನೀರಿಗೆ ಇಳಿದಿದ್ದ ಮೂವರು ವಿದ್ಯಾರ್ಥಿಗಳು ನೀರು ಪಾಲಾಗಿದ್ದಾರೆ. 

ಇದನ್ನು ಓದಿ: ಪ್ರವಾಸಕ್ಕೆಂದು ಮಲ್ಪೆ ಬೀಚ್ ಗೆ ಬಂದಿದ್ದ ಬೆಂಗಳೂರು ಮೂಲದ ಇಬ್ಬರು ವಿದ್ಯಾರ್ಥಿಗಳು ನೀರುಪಾಲು

ಮೃತರನ್ನು ಪೂಜಾ , ರಾಧಿಕಾ ಹಾಗೂ ಇಮ್ರಾನ್ ಎಂದು ಗುರುತಿಸಲಾಗಿದೆ. 

ಬೆಂಗಳೂರಿನಲ್ಲಿ ಡಿ ಫಾರ್ಮಸಿ ಓದುತ್ತಿದ್ದ ಈ ವಿದ್ಯಾರ್ಥಿಗಳು ಬೈಕ್‌ನಲ್ಲಿ ಶ್ರೀನಿವಾಸ ಸಾಗರ ಡ್ಯಾಂ ತೆರಳಿದ್ದು, ಮಧ್ಯಾಹ್ನದ ವೇಲೆ ಡ್ಯಾಮ್‌ನಲ್ಲಿ ಈಜಲು ಮುಂದಾಗಿದ್ದಾರೆ. ಈ ವೇಳೆ ಡ್ಯಾಮ್‌ನ ಒಳಗಿದ್ದ ಕಲ್ಲಿನ ಮೇಲೆ ನಿಂತುಕೊಂಡು ಒಬ್ಬರನ್ನೊಬ್ರು ಕೈ ಹಿಡಿದುಕೊಂಡು ಆಳವಿರುವ ಪ್ರದೇಶಕ್ಕೆ ಹೋಗಿದ್ದಾರೆ. ಆದರೆ, ಈ ವೇಳೆ ಒಬ್ಬರು ಕಾಲುಜಾರಿ ಬಿದ್ದಿದ್ದಾರೆ. ಅವರನ್ನು ರಕ್ಷಣೆ ಮಾಡಲು ಎಲ್ಲರೂ ಕೈ- ಕೈ ಹಿಡಿದುಕೊಂಡು ಸರಪಳಿ ರೀತಿಯಲ್ಲು ಮುಂದಾಗಿದ್ದಾರೆ. ಆದರೆ, ಈ ವೇಳೆ ಮೊದಲು ಕಾಲು ಜಾರಿ ಬಿದ್ದ ವಿದ್ಯಾರ್ಥಿನಿಯ ಜೊತೆಗೆ ಮತ್ತಿಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. 

ಉಳಿದಂತೆ ಇನ್ನು ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

LEAVE A REPLY

Please enter your comment!
Please enter your name here