Home ಕರ್ನಾಟಕ ವ್ಯಕ್ತಿಗಿಂತ ಪಕ್ಷ ದೊಡ್ಡದು: ಕಿಶೋರ್ ಕುಮಾರ್ ಕುಂದಾಪುರ

ವ್ಯಕ್ತಿಗಿಂತ ಪಕ್ಷ ದೊಡ್ಡದು: ಕಿಶೋರ್ ಕುಮಾರ್ ಕುಂದಾಪುರ

23
0

ಉಡುಪಿ, ಜೂ.7: ಯಾವುದೇ ವ್ಯಕ್ತಿಗಿಂತ ಪಕ್ಷ ದೊಡ್ಡದು ಎಂಬ ಸಂದೇಶವನ್ನು ಈ ಬಾರಿಯ ಚುನಾವಣೆ ಸಾಬೀತುಪಡಿ ಸಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ ಕುಮಾರ್ ಕುಂದಾಪುರ ಹೇಳಿದ್ದಾರೆ.

ವಿಧಾನ ಪರಿಷತ್ತಿನ ನೈರುತ್ಯ ಪದವೀಧರ ಕ್ಷೇತ್ರ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರ ಚುನಾವಣೆಯಲ್ಲಿ ಡಾ. ಧನಂಜಯ ಸರ್ಜಿ ಮತ್ತು ಎಸ್. ಎಲ್. ಭೋಜೇಗೌಡ ಅವರ ಭರ್ಜರಿ ಗೆಲುವಿನ ಹಿನ್ನೆಲೆಯಲ್ಲಿ ಶುಕ್ರವಾರ ಬಿಜೆಪಿ ಜಿಲ್ಲಾ ಕಚೇರಿ ಎದುರು ನಡೆದ ವಿಜಯೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಈಗಾಗಲೇ ನಡೆದ ಲೋಕಸಭಾ ಚುನಾವಣೆಯಲ್ಲಿ ನಿರೀಕ್ಷೆಗೂ ಮೀರಿದ ಅಂತರದಿಂದ ಬಿಜೆಪಿ ಅದ್ಭುತ ಗೆಲುವು ಸಾಧಿ ಸಿದೆ. ಗೆಲುವಿನ ಅಂತರ ಸ್ವತಃ ಅಭ್ಯರ್ಥಿಯನ್ನೇ ಅಚ್ಚರಿಗೊಳಿಸಿದೆ. ಇತ್ತೀಚೆಗೆ ನಡೆದ ನೈರುತ್ಯ ಪದವೀಧರ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಮತ್ತು ಎನ್‌ಡಿಎ ಅಭ್ಯರ್ಥಿಗಳು ಪ್ರಚಂಡ ಗೆಲುವು ಸಾಧಿಸುವ ಮೂಲಕ ನಮ್ಮದು ಗೆಲುವಿನ ಪರ್ವವಾಗಿ ಮಾರ್ಪಟ್ಟಿದೆ ಎಂದರು.

ಅಭ್ಯರ್ಥಿಯ ಆಯ್ಕೆ ಸಂದರ್ಭದಲ್ಲಿ ಆಸೆ, ಆಕಾಂಕ್ಷೆಗಳು ಸಹಜ. ಆದರೆ, ಪಕ್ಷ ಅಭ್ಯರ್ಥಿ ಆಯ್ಕೆ ಮಾಡಿದ ಬಳಿಕ ಅವರನ್ನು ಬೆಂಬಲಿಸುವುದು ಪಕ್ಷ ನಿಷ್ಠೆ ಮತ್ತು ಧರ್ಮ ಎಂದೆನಿಸುತ್ತದೆ. ಈ ನಿಟ್ಟಿನಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಬದ್ಧತೆಯಿಂದ ಪ್ರಾಮಾಣಿಕವಾಗಿ ತೊಡಗಿಸಿಕೊಂಡ ಪಕ್ಷದ ಮುಖಂಡರು, ಪದಾಧಿಕಾರಿಗಳು ಮತ್ತು ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿ ಸುವ ಜೊತೆಗೆ ಪ್ರಚಂಡ ಗೆಲುವು ಸಾಧಿಸಿದ ಡಾ. ಧನಂಜಯ ಸರ್ಜಿ ಮತ್ತು ಎಸ್.ಎಲ್. ಭೋಜೇಗೌಡ ಅವರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದರು.

ವಿಧಾನಪರಿಷತ್ ಚುನಾವಣೆಯಲ್ಲಿ ಬಂಡಾಯ ಅಭ್ಯರ್ಥಿಯಾಗಿ ಉಡುಪಿ ಯವರೇ ಆದ ಮಾಜಿ ಶಾಸಕ ರಘುಪತಿ ಭಟ್ ಸ್ಪರ್ಧೆಗಿಳಿದಾಗ ಸ್ವಲ್ಪ ಆತಂಕ ವಿತ್ತು. ಆದರೆ, ಭಟ್ ಅವರ ಅಭಿಮಾನಿಗಳಾಗಿದ್ದರೂ ಕಾರ್ಯಕರ್ತರು ಪಕ್ಷ ಬೆಂಬಲಿತ ಅಭ್ಯರ್ಥಿಯನ್ನೇ ಬೆಂಬಲಿಸಿದ್ದಾರೆ. ಜೊತೆಗೆ ಮೈತ್ರಿ ಅಭ್ಯರ್ಥಿಯ ಗೆಲುವಿಗೂ ಕಾರಣರಾಗಿದ್ದಾರೆ. ವ್ಯಕ್ತಿಗಿಂತ ಪಕ್ಷ ದೊಡ್ಡದು ಎಂಬ ಚಿಂತನೆಯ ಪಕ್ಷದ ತತ್ವಕ್ಕೆ ವಿರೋಧವಾಗಿ ಪಕ್ಷ ತ್ಯಜಿಸಿದವರಿಗೆ ಏನಾಗುತ್ತದೆ ಎಂಬುದು ಈ ಬಾರಿಯ ಚುನಾವಣೆ ಸ್ಪಷ್ಟಪಡಿಸಿದೆ. ಮುಂದಿನ ದಿನಗಳಲ್ಲಿ ಪಕ್ಷ ಬಿಟ್ಟು ಹೋಗುವವರಿಗೆ ಇದು ಎಚ್ಚರಿಕೆಯ ಗಂಟೆ ಎಂದರು.

ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ ಶೆಟ್ಟಿ ಮಾತನಾಡಿ ಈ ಬಾರಿಯ ಗೆಲುವು ಪಕ್ಷದ ಕಾರ್ಯ ಕರ್ತರಿಗೆ ಸಂದ ಜಯ. ನೈರುತ್ಯ ಪದವೀಧರ ಕ್ಷೇತ್ರವನ್ನು ಬಿಜೆಪಿ 1988ರಿಂದ ಸತತವಾಗಿ ಗೆಲ್ಲುತ್ತಾ ಬಂದಿದೆ. ಎಷ್ಟೇ ಪ್ರಭಾವಿಗಳಾದರೂ ಗೆಲುವಿಗೆ ಪಕ್ಷದ ಆಸರೆ ಅತ್ಯಗತ್ಯ ಎಂಬುದು ಈ ಚುನಾವಣೆಯಲ್ಲಿ ಸಾಬೀತಾಗಿದೆ ಎಂದರು.

ಈ ಸಂದರ್ಭದಲ್ಲಿ ಬಿಜೆಪಿ ನಿಕಟಪೂರ್ವ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಮಾಜಿ ಜಿಲ್ಲಾಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ, ತಿಂಗಳೆ ವಿಕ್ರಮಾರ್ಜುನ ಹೆಗ್ಡೆ, ಜಿಲ್ಲಾ ಉಪಾಧ್ಯಕ್ಷ ಕಿರಣ್‌ಕುಮಾರ್ ಬೈಲೂರು, ಜಿಲ್ಲಾ ಪ್ರಧಾನ ಕಾರ್ಯ ದರ್ಶಿ ದಿನಕರ ಶೆಟ್ಟಿ ಹೆರ್ಗ, ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಚಾಲಕ ಕುತ್ಯಾರು ನವೀನ್ ಶೆಟ್ಟಿ, ಮನೋಹರ ಎಸ್. ಕಲ್ಮಾಡಿ,ಅನಿತಾ ಶ್ರೀಧರ್, ಶಿವಕುಮಾರ ಅಂಬಲಪಾಡಿ, ವಿಜಯ ಕುಮಾರ ಉದ್ಯಾವರ, ಸಂಧ್ಯಾ ರಮೇಶ್, ವೀಣಾ ಎಸ್. ಶೆಟ್ಟಿ, ನಳಿನಿ ಪ್ರದೀಪ್ ರಾವ್, ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ ಮುಂತಾದವರು ಉಪಸ್ಥಿತರಿದ್ದರು.

 

LEAVE A REPLY

Please enter your comment!
Please enter your name here