Home Uncategorized ವ್ಯಕ್ತಿತ್ವ ವಿಕಸನಗೊಳಿಸುವ ಕಾರ್ಯಕ್ರಮ ನಡೆಯಬೇಕು: ನೀಲಕಂಠ ಹೆಗ್ಡೆ

ವ್ಯಕ್ತಿತ್ವ ವಿಕಸನಗೊಳಿಸುವ ಕಾರ್ಯಕ್ರಮ ನಡೆಯಬೇಕು: ನೀಲಕಂಠ ಹೆಗ್ಡೆ

21
0

ಕುಂದಾಪುರ: ಎಲ್ಲಿಯ ತನಕ ಗೆಲುವು ಸಿಗುತ್ತದೊ ಅಲ್ಲಿಯ ತನಕವೂ ಹೋರಾಟ ಮಾಡಬೇಕು. ಜೀವನದ ಮೌಲ್ಯ ಗಳನ್ನೇ ಕಳೆದು ಕೊಳ್ಳುತ್ತಿರುವ ಇಂದಿನ ದಿನಗಳಲ್ಲಿ ವ್ಯಕ್ತಿತ್ವ ವಿಕಸನಗೊಳ್ಳುವಂತಹ ಕಾರ್ಯಕ್ರಮಗಳು ಹೆಚ್ಚೆಚ್ಚು ನಡೆಯ ಬೇಕು ಎಂದು ಲಯನ್ಸ್ ಜಿಲ್ಲಾ ಮಾಜಿ ಗವನರ್ರ್ ನೀಲಕಂಠ ಎಂ. ಹೆಗ್ಡೆ ಹೇಳಿದ್ದಾರೆ.

ಮೂಡ್ಲಕಟ್ಟೆಯ ಐಎಂಜೆ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ ಆ್ಯಂಡ್ ಕಾಮರ್ಸ್ ಕಾಲೇಜಿನ ಆಶ್ರಯದಲ್ಲಿ ವಿವೇಕಾನಂದ ಜಯಂತಿಯ ಪ್ರಯಕ್ತ ಶುಕ್ರವಾರ ಕಾಲೇಜು ಸಭಾಭವನದಲ್ಲಿ ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಗಳ ವಿವಿಧ ಕಾಲೇಜು ವಿದ್ಯಾಥಿಗಳಿಗಾಗಿ ಆಯೋಜಿಸಿದ ಐಎಂಜೆಐಎಸ್‌ಸಿ ಯಂಗ್ ಲೀಡರ್ ಅವಾರ್ಡ್-೨೦೨೪ನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸ್ವಾಮಿ ವಿವೇಕಾನಂದರ ತತ್ವ, ಆದರ್ಶಗಳನ್ನು ಅವರ ಬದುಕಿನ ಜೀವನ ವನ್ನು ಅರ್ಥೈಸಿಕೊಂಡರೆ ಇಡೀ ಜಗತ್ತನ್ನು ಅರ್ಥೈಸಿಕೊಂಡಂತೆ. ಭಾರತೀಯ ಸಂಸ್ಕೃತಿಯನ್ನು ಜಗತ್ತಿಗೆ ಪರಿಚಯಿಸಿದ ಮಹಾನ್ ಪುರುಷ ವಿವೇಕಾನಂದ ಎಂದು ಅವರು ಹೇಳಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜು ಪ್ರಾಂಶುಪಾಲೆ ಪ್ರತಿಭಾ ಎಂ. ಪಟೇಲ್, 22ಕ್ಕೂ ಅಧಿಕ ಕಾಲೇಜುಗಳಿಂದ ಈಗಾಗಲೇ ಆಯ್ಕೆ ಮಾಡಿದ 50ರಷ್ಟು ವಿದ್ಯಾರ್ಥಿಗಳಿಗೆ ಅವರ ಪ್ರತಿಭಾ ಪ್ರದರ್ಶನಕ್ಕೆ ಅವಕಾಶವಿದೆ. ಸ್ಪರ್ಧೆಯಲ್ಲಿ ಸೋಲು-ಗೆಲುವು ಸಾಮಾನ್ಯ. ಆದರೆ ಕಲಿಕೆ ಮಾತ್ರ ನಿರಂತರವಾಗಿರಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ವಿಜಯ ಬ್ಯಾಂಕ್‌ನ ನಿವೃತ್ತ ಸಹಾಯಕ ಮುಖ್ಯ ವ್ಯವಸ್ಥಾಪಕ ಸದಾನಂದ ಭಟ್, ಕುಂದಾಪುರ ಲಯನ್ಸ್ ಕ್ಲಬ್‌ನ ಮಾಜಿ ಅಧ್ಯಕ್ಷ ರಾಜೀವ್ ಕೋಟ್ಯಾನ್, ಐಎಂಜೆ ವಿದ್ಯಾಸಂಸ್ಥೆಯ ನಿರ್ದೇಶಕ ಡಾ. ರಾಮಕೃಷ್ಣ ಹೆಗ್ಡೆ, ಉಪಪ್ರಾಂಶುಪಾಲ ಜಯಶೀಲ ಶೆಟ್ಟಿ ಉಪಸ್ಥಿತರಿದ್ದರು.

ವಿದ್ಯಾರ್ಥಿನಿ ಚೇತನಾ ಪ್ರಾರ್ಥಿಸಿದರು. ಪ್ರಾಧ್ಯಾಪಕಿ ಸುಮನಾ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here