ಪಡುಬಿದ್ರೆ, ಜ.1: ಇಲ್ಲಿನ ದೀನ್ ಸ್ಟ್ರೀಟ್ ನಿವಾಸಿ ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದ ಶಬ್ಬೀರ್ ಹುಸೈನ್ ಸಾಹೇಬ್ (77) ಸೋಮವಾರ ಬೆಳಗ್ಗೆ ಹೃದಯಾಘಾತದಿಂದ ನಿಧನ ಹೊಂದಿದರು.
ಪಡುಬಿದ್ರೆ ಉರ್ದು ಶಾಲೆಯ ಸಂಚಾಲಕರಾಗಿ ಉರ್ದು ಶಾಲೆಯ ಅಭಿವೃದ್ಧಿಯಲ್ಲಿ ಸಕ್ರಿಯರಾಗಿದ್ದ ಇವರು, ಹಿಮಾಯತುಲ್ ಇಸ್ಲಾಂ ಸಂಘದ ಅಧ್ಯಕ್ಷರಾಗಿ, ಜಮೀಯ್ಯತುಲ್ ಫಲಾಹ್ ಕಾಪು ಘಟಕದ ಉಪಾಧ್ಯಕ್ಷರಾಗಿ, ಪಡುಬಿದ್ರೆ ಜುಮಾ ಮಸೀದಿ ಸಮಿತಿಯ ಮಾಜಿ ಉಪಾಧ್ಯಕ್ಷರಾಗಿ, ದೀನ್ ಸ್ಟೀಟ್ ನಲ್ಲಿರುವ ನೂರಾನಿಯಾ ಹನಫಿ ಜಾಮಿಯಾ ಮಸೀದಿಯ ಸಲಹೆಗಾರರಾಗಿ, ಕರ್ನಾಟಕ ಮುಸ್ಲಿಮ್ ಜಮಾಅತ್ನಲ್ಲಿ ಕಾರ್ಯನಿರ್ವಹಿಸಿದ್ದರು.
ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಂಡಿದ್ದ ಇವರನ್ನು ಸಮಾಜ ಸೇವಾ ಕ್ಷೇತ್ರದ ಸಾಧನೆಗಾಗಿ ಉಡುಪಿ ಜಿಲ್ಲಾಡಳಿತವು 2017ರಲ್ಲಿ ಉಡುಪಿ ಜಿಲ್ಲಾ ರಾಜ್ಯೊತ್ಸವ ಪ್ರಶಸ್ತಿ ನೀಡಿ ಗೌರವಿಸಿತ್ತು.