Home Uncategorized ಶಿವಮೊಗ್ಗ | ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ: ಸುಟ್ಟು ಕರಕಲಾದ ಅಂಗಡಿ

ಶಿವಮೊಗ್ಗ | ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ: ಸುಟ್ಟು ಕರಕಲಾದ ಅಂಗಡಿ

16
0

ಶಿವಮೊಗ್ಗ, ಡಿ.27: ಜ್ಯೂಸ್ ಸೆಂಟರ್ ವೊಂದರಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡ ಸಂಭವಿಸಿ 3-4 ಲಕ್ಷ ರೂ. ಮೌಲ್ಯದ ಸೊತ್ತುಗಳು ಹಾನಿಯಾಗಿರುವ ಘಟನೆ ತೀರ್ಥಹಳ್ಳಿ ಪಟ್ಟಣದ ಗಾಂಧಿ ಚೌಕದ ಕಲ್ಲಾರೆ ಗಣಪತಿ ದೇವಸ್ಥಾನದ ಸಮೀಪ ನಡೆದಿದೆ.

ಕಲ್ಲಾರೆ ಗಣಪತಿ ದೇವಸ್ಥಾನದ ಸಮೀಪದ ಹರೇ ರಾಮ ಹರೇ ಕೃಷ್ಣ ಗಿಫ್ಟ್ – ಜ್ಯೂಸ್ ಸೆಂಟರ್ ನಲ್ಲಿ ಈ ಬೆಂಕಿ ಅವಘಡ ಸಂಭವಿಸಿದೆ. ಮಂಗಳವಾರ ರಾತ್ರಿ ಅಂಗಡಿ ಬಾಗಿಲು ಹಾಕಿ ಹೋದ ನಂತರದಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿದ್ದು, ಪಕ್ಕದಲ್ಲಿ ಇದ್ದ ಅಂಗಡಿಯವರು ಹೊಗೆ ಬರುವುದನ್ನು ಗಮನಿಸಿ ಮಾಲಕರಿಗೆ ತಿಳಿಸಿದ್ದಾರೆ.

ನಂತರ ಅಕ್ಕ ಪಕ್ಕದ ಸ್ಥಳೀಯರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

ಬೆಂಕಿಯಿಂದ ಅಂಗಡಿ ಅಂಗಡಿ ಸಂಪೂರ್ಣ ಸುಟ್ಟು ಕರಕಲಾಗಿದೆ.

LEAVE A REPLY

Please enter your comment!
Please enter your name here