Home Uncategorized ಶ್ರೀರಾಮ ಮಂದಿರ ಉದ್ಘಾಟನೆ: ಸಚಿವೆ ಹೆಬ್ಬಾಳ್ಕರ್ ಗೆ ವಿ.ಎಚ್.ಪಿ. ಆಮಂತ್ರಣ

ಶ್ರೀರಾಮ ಮಂದಿರ ಉದ್ಘಾಟನೆ: ಸಚಿವೆ ಹೆಬ್ಬಾಳ್ಕರ್ ಗೆ ವಿ.ಎಚ್.ಪಿ. ಆಮಂತ್ರಣ

5
0

ಬೆಳಗಾವಿ, ಜ.4: ಅಯೋಧ್ಯೆಯ ಶ್ರೀರಾಮ ಮಂದಿರ ಉದ್ಘಾಟನೆ ಹಿನ್ನೆಲೆಯಲ್ಲಿ ಹಮ್ಮಿಕೊಂಡಿರುವ ಅಕ್ಷತಾ ಅಭಿಯಾನದ ಅಂಗವಾಗಿ ವಿಶ್ವ ಹಿಂದೂ ಪರಿಷತ್ ಪ್ರಮುಖರು ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಮನೆಗೆ ತೆರಳಿ, ಕಾರ್ಯಕ್ರಮಕ್ಕೆ ಆಮಂತ್ರಣ ನೀಡಿದರು.

ಈ ಸಮಯದಲ್ಲಿ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಮೃಣಾಲ ಹೆಬ್ಬಾಳ್ಕರ್, ವಿಶ್ವ ಹಿಂದೂ ಪರಿಷತ್ತಿನ ಪ್ರಮುಖರಾದ ಪರಮೇಶ್ವರ ಹೆಗಡೆ, ಶ್ರೀಕಾಂತ ಕದಂ, ಆನಂದ ಬುಕ್ಕೆಬಾಗ್, ಗುರುದತ್ತ ಕುಲಕರ್ಣಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here