ಧಾರವಾಡ: ಸಮರ್ಪಕ ವಿದ್ಯುತ್ ಪೂರೈಕೆ ಮಾಡದ ಹಿನ್ನೆಲೆ ಧಾರವಾಡದ ಬೆಳಗಾವಿ ರಸ್ತೆಯಲ್ಲಿರುವ ವಿದ್ಯುತ್ ವಿತರಣಾ ಕೇಂದ್ರದ ಎದುರು ರೈತರು ಪ್ರತಿಭಟನೆ ನಡೆಸಿದ್ದಾರೆ. ಪಂಪ್ಸೆಟ್ ಗೆ ಸರಿಯಾದ ವಿದ್ಯುತ್ ಪೂರೈಕೆ ಆಗುತ್ತಿಲ್ಲ. ಮೊದಲು 7ತಾಸು ವಿದ್ಯುತ್ ಇರುತ್ತಿತ್ತು ಇದೀಗ 4ತಾಸಿಗೆ ವಿದ್ಯುತ್ ಕಡಿತ ಹಿನ್ನೆಲೆ ರೈತರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಧಾರವಾಡ ತಾಲೂಕಿನ ನರೇಂದ್ರ ಗ್ರಾಮದ ರೈತರಿಂದ ಪ್ರತಿಭಟನೆ ನಡೆಯುತ್ತಿದ್ದು, ಪ್ರತಿಭಟನೆ ಹಿನ್ನೆಲೆ ವಿದ್ಯುತ್ ಕೇಂದ್ರಕ್ಕೆ ಪೊಲೀಸರ ಸರ್ಪಗಾವಲು ನಿಯೋಜನೆ ಮಾಡಲಾಗಿದೆ. ನಂತರ ರೈತರೊಂದಿಗೆ ಹೆಸ್ಕಾಂ ಅಧಿಕಾರಿಗಳ ಮಾತುಕತೆ ನಡೆಸಿ ಪ್ರತಿಭಟನೆ ಕೈ ಬಿಡುವಂತೆ ಅಧಿಕಾರಿಗಳ ಮನವಿ ಮಾಡಿದರೂ ಸಹ ಮನವಿಗೆ ಸ್ಪಂದಿಸದ ರೈತರು ಚಕ್ಕಡಿ ರಸ್ತೆ ಮಧ್ಯೆ ಇಟ್ಟು ಪ್ರತಿಭಟನೆ ಮಾಡಿದ್ದಾರೆ.
The post ಸಮರ್ಪಕ ವಿದ್ಯುತ್ ಪೂರೈಕೆ ಮಾಡದ ಹಿನ್ನೆಲೆ: ಕೇಂದ್ರದ ಎದುರು ರೈತರ ಪ್ರತಿಭಟನೆ appeared first on Ain Live News.