Home Uncategorized ಸೀಮೆಸುಣ್ಣ ಮುರಿದಿದ್ದಕ್ಕೆ ವಿದ್ಯಾರ್ಥಿಯನ್ನು ಥಳಿಸಿದ ಶಿಕ್ಷಕ, ವಿದ್ಯಾರ್ಥಿ ಅಮೃತ್​ ಕೈ ಕಟ್

ಸೀಮೆಸುಣ್ಣ ಮುರಿದಿದ್ದಕ್ಕೆ ವಿದ್ಯಾರ್ಥಿಯನ್ನು ಥಳಿಸಿದ ಶಿಕ್ಷಕ, ವಿದ್ಯಾರ್ಥಿ ಅಮೃತ್​ ಕೈ ಕಟ್

43
0

ಮೈಸೂರು: ಕ್ಷುಲ್ಲಕ ಕಾರಣಕ್ಕೆ ಶಿಕ್ಷಕ (Teacher), ವಿದ್ಯಾರ್ಥಿಯನ್ನು (Student) ಥಳಿಸಿರುವ ಘಟನೆ ಜಿಲ್ಲೆಯ ಹೆಚ್.ಡಿ.ಕೋಟೆ (HD Kote) ತಾಲೂಕಿನ ಶಾಂತಿಪುರದಲ್ಲಿ ನಡೆದಿದೆ. 8ನೇ ತರಗತಿ ವಿದ್ಯಾರ್ಥಿ ಅಮೃತ್ ಕೈಗೆ ಗಂಭೀರ ಗಾಯವಾಗಿದೆ. ಅಮೃತ್​ ಕೊಠಡಿಯಲ್ಲಿ ಸೀಮೆಸುಣ್ಣ ಮುರಿದು ಆಟವಾಡುತ್ತಿದ್ದ ಎಂಬ ಕಾರಣಕ್ಕೆ ಶಿಕ್ಷಕ ಸಿದ್ದರಾಜು ಸ್ಟೀಲ್ ಸ್ಕೇಲ್​​ನಿಂದ ಹೊಡೆದಿದ್ದಾನೆ. ಇದರಿಂದ ವಿದ್ಯಾರ್ಥಿ ಅಮೃತ್​ ಕೈ ಕಟ್​ ಆಗಿದೆ. ಇದನ್ನು ಕಂಡ ಶಿಕ್ಷಕ ಸಿದ್ದರಾಜು, ಅಮೃತ್​ ಪೋಷಕರಿಗೆ ಕಟರ್​ನಿಂದ ಕೈಕಟ್ ಮಾಡಿಕೊಂಡಿರುವುದಾಗಿ ಸುಳ್ಳು ಮಾಹಿತಿ ನೀಡಿದ್ದಾನೆ. ವಿಷಯ ತಿಳಿಯುತ್ತಿದ್ದಂತೆ ಶಾಲೆಗೆ ತಾಲೂಕು ಶಿಕ್ಷಣಾಧಿಕಾರಿ ಉದಯಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್.ಡಿ.ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್  ಮಾಡಿ

LEAVE A REPLY

Please enter your comment!
Please enter your name here