ವಿಜಯನಗರ ಜಿಲ್ಲೆಯ ಐತಿಹಾಸಿಕ ಹಂಪಿಯಲ್ಲಿ “ಹಂಪಿ ಉತ್ಸವ – 2023ಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸಚಿವರಾದ ಬಿ. ಶ್ರೀರಾಮುಲು. ಶಶಿಕಲಾ ಜೊಲ್ಲೆ ಮತ್ತಿತರರು ಉಪಸ್ಥಿತರಿದ್ದರು. ಹಂಪಿ: ವಿಜಯನಗರ ಜಿಲ್ಲೆಯ ಐತಿಹಾಸಿಕ ಹಂಪಿಯಲ್ಲಿ “ಹಂಪಿ ಉತ್ಸವ – 2023ಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸಚಿವರಾದ ಬಿ. ಶ್ರೀರಾಮುಲು. ಶಶಿಕಲಾ ಜೊಲ್ಲೆ ಮತ್ತಿತರರು ಉಪಸ್ಥಿತರಿದ್ದರು.
ನಂತರ ಮಾತನಾಡಿದ ಮುಖ್ಯಮಂತ್ರಿ, ಹಂಪಿ ಸರ್ಕಿಟ್ ಶೀಘ್ರದಲ್ಲಿಯೇ ಆರಂಭವಾಗಿ, ಪ್ರವಾಸೋದ್ಯಮಕ್ಕೆ ಪೂರಕವಾಗುವ ಚಟುವಟಿಕೆಗಳನ್ನು ಆರಂಭಿಸಲಿದೆ ಎಂದರು.
ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ @BSBommai ಅವರು ವಿಜಯನಗರ ಜಿಲ್ಲೆಯ ಹಂಪಿಯಲ್ಲಿ ನಡೆದ “ಹಂಪಿ ಉತ್ಸವ – 2023″ನ್ನು ಉದ್ಘಾಟಿಸಿ, ಮಾತನಾಡಿದರು. pic.twitter.com/L9zWF5sywq
— CM of Karnataka (@CMofKarnataka) January 27, 2023
ಕರ್ನಾಟಕ ಅತಿ ಹೆಚ್ಚು ಐತಿಹಾಸಿಕ ಸ್ಥಳಗಳನ್ನು ಹೊಂದಿರುವ ರಾಜ್ಯವಾಗಿದೆ. ಅಂತಾರಾಷ್ಟ್ರೀಯ ಪ್ರವಾಸಿಗರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ನಮ್ಮ ಸರ್ಕಾರ ಆಯವ್ಯಯದಲ್ಲಿ ಉತ್ತರದಲ್ಲಿ ಹಂಪಿ ಸರ್ಕಿಟ್ ಹಾಗೂ ದಕ್ಷಿಣದಲ್ಲಿ ಮೈಸೂರು ಸರ್ಕಿಟ್ ನ್ನು ಘೋಷಿಸಿತ್ತು ಎಂದು ಅವರು ತಿಳಿಸಿದರು.