Home Uncategorized ಹದ್ದು ಡಿಕ್ಕಿಗೆ ಹೆಲಿಕಾಪ್ಟರ್‌ ಗ್ಲಾಸ್ ಪೀಸ್ ಪೀಸ್: ಅಪಾಯದಿಂದ ಪಾರಾದ ಬೆನ್ನಲ್ಲೇ ಅಜ್ಜಯನ ಮೊರೆ ಹೋದ...

ಹದ್ದು ಡಿಕ್ಕಿಗೆ ಹೆಲಿಕಾಪ್ಟರ್‌ ಗ್ಲಾಸ್ ಪೀಸ್ ಪೀಸ್: ಅಪಾಯದಿಂದ ಪಾರಾದ ಬೆನ್ನಲ್ಲೇ ಅಜ್ಜಯನ ಮೊರೆ ಹೋದ ಡಿಕೆ.ಶಿವಕುಮಾರ್

24
0

ಬೆಂಗಳೂರಿನಿಂದ ಮುಳಬಾಗಿಲಿಗೆ ಹೋಗುವ ವೇಳೆ ಹೆಲಿಕಾಪ್ಟರ್‌ಗೆ ಹದ್ದು ಡಿಕ್ಕಿ ಹೊಡೆದು ಸಂಭವಿಸಿದ ದುರಂತದಲ್ಲಿ ಪ್ರಾಣಾಪಾಯದಿಂದ ಪಾರಾದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರು ಬುಧವಾರ ಬೆಳಗ್ಗೆಯೇ ಅಜ್ಜಯ್ಯನ ಮೊರೆ ಹೋಗಿದ್ದಾರೆ. ತುಮಕೂರು: ಬೆಂಗಳೂರಿನಿಂದ ಮುಳಬಾಗಿಲಿಗೆ ಹೋಗುವ ವೇಳೆ ಹೆಲಿಕಾಪ್ಟರ್‌ಗೆ ಹದ್ದು ಡಿಕ್ಕಿ ಹೊಡೆದು ಸಂಭವಿಸಿದ ದುರಂತದಲ್ಲಿ ಪ್ರಾಣಾಪಾಯದಿಂದ ಪಾರಾದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರು ಬುಧವಾರ ಬೆಳಗ್ಗೆಯೇ ಅಜ್ಜಯ್ಯನ ಮೊರೆ ಹೋಗಿದ್ದಾರೆ.

ಡಿ.ಕೆ. ಶಿವಕುಮಾರ್‌ ಅವರು ಮಂಗಳವಾರ ಜಕ್ಕೂರಿನಿಂದ ಮುಳಬಾಗಿಲಿಗೆ ಹೆಲಿಕಾಪ್ಟರ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ ರಣಹದ್ದು ಒಂದು ಹೆಲಿಕಾಪ್ಟರ್‌ನ ವಿಂಡ್‌ ಶೀಲ್ಡ್‌ಗೆ ಡಿಕ್ಕಿ ಹೊಡೆದು ಅವಘಡ ಸಂಭವಿಸಿತ್ತು.

ವಿಂಡ್‌ ಶೀಲ್ಡ್‌ ಸಂಪೂರ್ಣ ಒಡೆದು ಅಪಾಯದ ಸ್ಥಿತಿ ತಲುಪಿತ್ತು. ಕೂಡಲೇ ಹೆಲಿಕಾಪ್ಟರನ್ನು ಎಚ್‌ಎಎಲ್‌ ವಿಮಾನ ನಿಲ್ದಾಣದಲ್ಲಿ ಇಳಿಸಲಾಯಿತು. ಈ ಮೂಲಕ ಭಾರೀ ಅಪಾಯದಿಂದ ಡಿ.ಕೆ.ಶಿವಕುಮಾರ್ ಅವರು ಪಾರಾಗಿದ್ದರು.

ಇದರ ನಡುವೆಯೇ ಡಿ.ಕೆ. ಶಿವಕುಮಾರ್‌ ಅವರು ತಾವು ಬಹುವಾಗಿ ನಂಬುವ ನೊಣವಿನಕೆರೆ ಅಜ್ಜಯ್ಯನ ದರ್ಶನ ಪಡೆದುಕೊಂಡಿದ್ದಾರೆ.

ಕಾಡು ಸಿದ್ದೇಶ್ವರ ಸ್ವಾಮೀಜಿ ಆತ್ಮವು ಅಜ್ಜಯ್ಯನಲ್ಲಿ ಐಕ್ಯವಾಗಿದೆ ಎಂಬ ಪ್ರತೀತಿಯಿದ್ದು, ಶಿವಕುಮಾರ್‌ ಅವರು ಆಗಾಗ ಇಲ್ಲಿಗೆ ಭೇಟಿ ನೀಡುತ್ತಿರುತ್ತಾರೆ.

LEAVE A REPLY

Please enter your comment!
Please enter your name here