ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ಪಟ್ಟಣದಲ್ಲಿ ರಾಮನವಮಿ ಮೆರವಣಿಗೆಯನ್ನು ಕೈಗೊಳ್ಳುವ ವಿಚಾರದಲ್ಲಿ ಎರಡು ಗುಂಪುಗಳ ನಡುವಿನ ಘರ್ಷಣೆ ನಡೆದಿದ್ದು, ಘಟನೆಯಲ್ಲಿ ಇಬ್ಬರಿಗೆ ಚಾಕುವಿನಿಂದ ಇರಿಯಲಾಗಿದೆ. ಹಾಸನ: ಜಿಲ್ಲೆಯ ಚನ್ನರಾಯಪಟ್ಟಣ ಪಟ್ಟಣದಲ್ಲಿ ರಾಮನವಮಿ ಮೆರವಣಿಗೆಯನ್ನು ಕೈಗೊಳ್ಳುವ ವಿಚಾರದಲ್ಲಿ ಎರಡು ಗುಂಪುಗಳ ನಡುವಿನ ಘರ್ಷಣೆ ನಡೆದಿದ್ದು, ಘಟನೆಯಲ್ಲಿ ಇಬ್ಬರಿಗೆ ಚಾಕುವಿನಿಂದ ಇರಿಯಲಾಗಿದೆ.
ಜಾಮಿಯಾ ಮಸೀದಿ ಬಳಿ ಈ ಘಟನೆ ನಡೆದಿದ್ದು, ಗುಂಪೊಂದು ಮೆರವಣಿಗೆಯನ್ನು ವಿರೋಧಿಸಿದಾಗ ಮತ್ತೊಂದು ಗುಂಪಿನೊಂದಿಗೆ ಘರ್ಷಣೆ ಉಂಟಾಯಿತು. ಈ ವೇಳೆ ಇಬ್ಬರು ಯುವಕರಿಗೆ ಚಾಕುವಿನಿಂದ ಇರಿಯಲಾಗಿದೆ.
ಮುರಳಿ ಮತ್ತು ಹರ್ಷ ಎಂಬುವವರಿಗೆ ಕುತ್ತಿಗೆ ಮತ್ತು ಹೊಟ್ಟೆಯಲ್ಲಿ ಗಾಯವಾಗಿದ್ದು, ಗುರುವಾರ ತಡರಾತ್ರಿ ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತು.
ಇದನ್ನೂ ಓದಿ: ಹಾಸನ: ಕುರಾನ್ ಪಠಣ ವಿರೋಧಿಸಿ ಪ್ರತಿಭಟನೆ; ಹಿಂದೂ ಕಾರ್ಯಕರ್ತರ ಮೇಲೆ ಲಾಠಿ ಚಾರ್ಜ್
ಘಟನೆ ಬಳಿಕ, ಕಾನೂನು ಸುವ್ಯವಸ್ಥೆ ಕಾಪಾಡಲು ಚನ್ನರಾಯಪಟ್ಟಣ ಪೊಲೀಸರು ಬಿಗಿ ಬಂದೋಬಸ್ತ್ ಮಾಡಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಪೊಲೀಸರು ದೂರು ಮತ್ತು ಪ್ರತಿದೂರು ದಾಖಲಿಸಿಕೊಂಡಿದ್ದಾರೆ. ಮುಂದಿನ ತನಿಖೆ ನಡೆಯುತ್ತಿದೆ.