Home Uncategorized ಹಿಂದೂಯೇತರರಿಗೆ ವ್ಯಾಪಾರಕ್ಕೆ ಅವಕಾಶವಿಲ್ಲವೆಂದು ಅಂಜನಾದ್ರಿ ಬೆಟ್ಟದಲ್ಲಿ ಹಾಕಿದ್ದ ಬ್ಯಾನರ್ ತೆರವುಗೊಳಿಸಿದ ಜಿಲ್ಲಾಡಳಿತ

ಹಿಂದೂಯೇತರರಿಗೆ ವ್ಯಾಪಾರಕ್ಕೆ ಅವಕಾಶವಿಲ್ಲವೆಂದು ಅಂಜನಾದ್ರಿ ಬೆಟ್ಟದಲ್ಲಿ ಹಾಕಿದ್ದ ಬ್ಯಾನರ್ ತೆರವುಗೊಳಿಸಿದ ಜಿಲ್ಲಾಡಳಿತ

41
0

ಕೊಪ್ಪಳ: ಅಂಜನಾದ್ರಿ ಬೆಟ್ಟದಲ್ಲಿ ಹಿಂದೂಯೇತರರಿಗೆ ವ್ಯಾಪಾರಕ್ಕೆ ಅವಕಾಶವಿಲ್ಲವೆಂದು ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಹಾಕಿದ್ದ ಬ್ಯಾನರ್​ನ್ನು ಜಿಲ್ಲಾಡಳಿತ ತೆರವುಗೊಳಿಸಿದೆ. ಜಿಲ್ಲೆಯ ಗಂಗಾವತಿ ತಾಲೂಕಿನ ಐತಿಹಾಸಿಕ ಅಂಜನಾದ್ರಿ ಬೆಟ್ಟದಲ್ಲಿ ಡಿಸೆಂಬರ್‌ 5ರಂದು ಹನುಮಮಾಲೆ ವಿಸರ್ಜನೆ ಕಾರ್ಯಕ್ರಮ ಹಿನ್ನೆಲೆ ಅಂದು ಅಂಜನಾದ್ರಿ ಬೆಟ್ಟಕ್ಕೆ ಲಕ್ಷಾಂತರ ಮಾಲಧಾರಿಗಳು ಆಗಮಿಸಲಿದ್ದಾರೆ. ಹೀಗಾಗಿ ಅಂದು ಕಾರ್ಯಕ್ರಮದಲ್ಲಿ ಹಿಂದೂಯೇತರರು ವ್ಯಾಪಾರ ಮಾಡಬಾರದೆಂದು ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಫ್ಲೆಕ್ಸ್ ಹಾಕಿದ್ದರು.

LEAVE A REPLY

Please enter your comment!
Please enter your name here