Home Uncategorized ಹೊಸಕೋಟೆ: ದೇವಸ್ಥಾನದಲ್ಲಿ ಪ್ರಸಾದ ಸೇವಿಸಿ ಅಸ್ವಸ್ಥಗೊಂಡಿದ್ದ ಮಹಿಳೆ ಮೃತ್ಯು

ಹೊಸಕೋಟೆ: ದೇವಸ್ಥಾನದಲ್ಲಿ ಪ್ರಸಾದ ಸೇವಿಸಿ ಅಸ್ವಸ್ಥಗೊಂಡಿದ್ದ ಮಹಿಳೆ ಮೃತ್ಯು

32
0

ಹೊಸಕೋಟೆ: ದೇವಸ್ಥಾನದಲ್ಲಿ ನೀಡಿದ  ಪ್ರಸಾದವನ್ನು ಸೇವಿಸಿ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆಯಲ್ಲಿ ನಡೆದಿದೆ.

ಮೃತ ಮಹಿಳೆಯನ್ನು ಹೊಸಕೋಟೆಯ ಕಾವೇರಿನಗರ ನಿವಾಸಿ ಸಿದ್ದಗಂಗಮ್ಮ (60) ಎಂದು ತಿಳಿದು ಬಂದಿದೆ. ಹನುಮ ಜಯಂತಿ ಹಿನ್ನೆಲೆಯಲ್ಲಿ ಹೊಸಕೋಟೆಯ ವೆಂಕಟರಮಣಸ್ವಾಮಿ, ಊರುಬಾಗಿಲು ಆಂಜನೇಯ, ಕೋಟೆ ಆಂಜನೇಯಸ್ವಾಮಿ ದೇವಾಲಯದಲ್ಲಿ ಭಕ್ತರು ಪುಲಿಯೋಗರೆ, ಪಾಯಸ, ಲಡ್ಡು ಸೇವಿಸಿದ್ದರು ಎಂದು ಹೇಳಲಾಗಿದೆ.

ದೇವಾಸ್ಥಾನದಲ್ಲಿ ಪ್ರಸಾದ ಸೇವಿಸಿದ್ದ ಭಕ್ತರು ರಾತ್ರಿಯಿಂದ ವಾಂತಿ ಭೇದಿಯಿಂದ ಅಸ್ವಸ್ಥಗೊಂಡಿದ್ದರು ಎನ್ನಲಾಗಿದೆ. ಅಸ್ವಸ್ಥರನ್ನು ಹೊಸಕೋಟೆ, ಕೋಲಾರ, ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೊಸಕೋಟೆಯ ಸಿಲಿಕಾನ್ ಸಿಟಿ ಆಸ್ವತ್ರೆಗೆ ದಾಖಲಾದವರಲ್ಲಿ 15ಕ್ಕೂ ಅಧಿಕ ಜನರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.

ಮೃತ ಮಹಿಳೆ ಸಿದ್ದಗಂಗಮ್ಮ ಅವರಿಗೆ ಪತಿ ಶಿವಣ್ಣ ಲಾಡು ಪ್ರಸಾದ ತಂದುಕೊಂಟಿದ್ದಾರೆ. ಈ ಪ್ರಸಾದವನ್ನು ಸೇವಿಸಿದ ಸಿದ್ದಗಂಗಮ್ಮ ಅವರು ಬೆಳಿಗ್ಗೆ ವಾಂತಿ ಭೇದಿಯಿಂದ ಬಳಲುತ್ತಿದ್ದರು. ಕೂಡಲೇ ಅವರನ್ನು ಹೊಸಕೋಟೆಯ ಸಿಲಿಕಾನ್ ಸಿಟಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಅವರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ ಎಂದು ಗೊತ್ತಾಗಿದೆ.

LEAVE A REPLY

Please enter your comment!
Please enter your name here