ತೆರಿಗೆ ಪಾವತಿಸದೇ ಸಂಚರಿಸುತ್ತಿದ್ದ ಐಷಾರಾಮಿ ಕಾರುಗಳು ವಶ
ಬೆಂಗಳೂರು:
ಸಾರಿಗೆ ಅಧಿಕಾರಿಗಳು ಇಂದು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಹಲವಾರು ಐಷಾರಾಮಿ ಕಾರುಗಳನ್ನು ವಶಪಡಿಸಿಕೊಂಡಿದ್ದಾರೆ. ಐಷಾರಾಮಿ ಕಾರುಗಳನ್ನು ತೆರಿಗೆ ಕಟ್ಟದೆ – ಮಾಲಿಕತ್ವ ಬದಲಾಯಿಸಿಕೊಳ್ಳದೇ ಸಂಚರಿಸುತ್ತಿದ್ದ ಕಾರುಗಳ ಬಗ್ಗೆ ಮಾಹಿತಿಯನ್ನು ಪಡೆದುಕೊಂಡು ಈ ಕಾರ್ಯಾಚರಣೆ ನಡೆಸಲಾಗಿದೆ.

ಸಾರಿಗೆ ಇಲಾಖೆಯ ಹೆಚ್ಚುವರಿ ಆಯುಕ್ತ ನರೇಂದ್ರ ಹೋಳ್ಕರ್ ನೇತೃತ್ವದಲ್ಲಿ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಾದ ರಾಜಣ್ಣ, ಮೋಟಾರ್ ವಾಹನ ನಿರೀಕ್ಷಕರಾದ ಸುಧಾಕರ್, ತಿಪ್ಪೇಸ್ವಾಮಿ, ವಿಶ್ವನಾಥ ಶೆಟ್ಟರ್, ರಂಜಿತ್, ರಾಜೇಶ್ ಮತ್ತು ರಾಜ್ ಕುಮಾರ್ ಅವರನ್ನ ಒಳಗೊಂಡ ತಂಡ ಇಂದು ಕಾರ್ಯಾಚರಣೆ ನಡೆಸಿತು.
