Home Uncategorized 2013ರಲ್ಲಿ ದೆಹಲಿಯ ಲೀಲಾ ಪ್ಯಾಲೇಸ್‌ನಲ್ಲಿ ಶೋಭಾ ಮತ್ತು ಯಡಿಯೂರಪ್ಪ ಯಾರನ್ನು ಭೇಟಿ ಮಾಡಿದ್ದರು? ಎಂ.ಬಿ ಪಾಟೀಲ್

2013ರಲ್ಲಿ ದೆಹಲಿಯ ಲೀಲಾ ಪ್ಯಾಲೇಸ್‌ನಲ್ಲಿ ಶೋಭಾ ಮತ್ತು ಯಡಿಯೂರಪ್ಪ ಯಾರನ್ನು ಭೇಟಿ ಮಾಡಿದ್ದರು? ಎಂ.ಬಿ ಪಾಟೀಲ್

30
0

ದೆಹಲಿಯ ಲೀಲಾ ಪ್ಯಾಲೇಸ್ ಹೋಟೆಲ್ ನಲ್ಲಿ ಅಂದು ಯಡಿಯೂರಪ್ಪ ಮತ್ತು ಶೋಭಾ ಕರಂದ್ಲಾಜೆ ವ್ಯಕ್ತಿಯೊಬ್ಬರನ್ನು ಭೇಟಿಯಾಗಿದ್ದರು. ಆ ಭೇಟಿಯ ಹಿನ್ನೆಲೆ ಏನು? ಭೇಟಿಯಾದ ವ್ಯಕ್ತಿ ಯಾರು ಎಂಬುದನ್ನು ಮೂರ್ನಾಲ್ಕು ದಿನಗಳಲ್ಲಿ ಬಹಿರಂಗಪಡಿಸಲಾಗುವುದು. ಬೆಂಗಳೂರು: ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಮತ್ತು ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಬೆನ್ನಿಗೆ ಚೂರಿ ಹಾಕಿರುವುದಾಗಿ ಹೇಳುತ್ತಿರುವ ಇದೇ ಮಾಜಿ ಮುಖ್ಯಂತ್ರಿ ಬಿ.ಎಸ್. ಯಡಿಯೂರಪ್ಪ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರೊಂದಿಗೆ 2013 ರಲ್ಲಿ ದೆಹಲಿಯ ಹೋಟೆಲ್ ವೊಂದರಲ್ಲಿ ಒಬ್ಬರನ್ನು ಭೇಟಿಯಾಗಿದ್ದರು. ಅವರು ಯಾರು ಎಂಬುದನ್ನು ನೆನಪಿಸಿಕೊಳ್ಳಲಿ ಎಂದು ಹೇಳುವ ಮೂಲಕ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್ ಹೊಸ ಬಾಂಬ್ ಸಿಡಿಸಿದ್ದಾರೆ.

ದೆಹಲಿಯ ಲೀಲಾ ಪ್ಯಾಲೇಸ್ ಹೋಟೆಲ್ ನಲ್ಲಿ ಅಂದು ಯಡಿಯೂರಪ್ಪ ಮತ್ತು ಶೋಭಾ ಕರಂದ್ಲಾಜೆ ವ್ಯಕ್ತಿಯೊಬ್ಬರನ್ನು ಭೇಟಿಯಾಗಿದ್ದರು. ಆ ಭೇಟಿಯ ಹಿನ್ನೆಲೆ ಏನು? ಭೇಟಿಯಾದ ವ್ಯಕ್ತಿ ಯಾರು ಎಂಬುದನ್ನು ಮೂರ್ನಾಲ್ಕು ದಿನಗಳಲ್ಲಿ ಬಹಿರಂಗಪಡಿಸಲಾಗುವುದು ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಇದನ್ನೂ ಓದಿ: ವಿಜಯಪುರ ಜಿಲ್ಲೆಗೆ ನೆರೆ ಪರಿಹಾರ ನೀಡಲು ಸರ್ಕಾರದ ಮಲತಾಯಿ ಧೋರಣೆ: ಎಂ ಬಿ ಪಾಟೀಲ್

ಬಿಜೆಪಿಯಿಂದ ಕಾಂಗ್ರೆಸ್ ಸೇರಿದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮತ್ತು ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರನ್ನು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಗುರಿಯಾಗಿಸಬಾರದು ಎಂದು ಪಾಟೀಲ್ ಹೇಳಿದರು.

ವೀರಶೈವ-ಲಿಂಗಾಯತ ಸಮುದಾಯದ ಮುಖಂಡರನ್ನು ಕಣಕ್ಕಿಳಿಸಲು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಂಚು ರೂಪಿಸಿ, ಈ ಇಬ್ಬರು ನಾಯಕರು ಬಿಜೆಪಿ ತೊರೆಯುವಂತೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಶೆಟ್ಟರ್ ಮತ್ತು ಸವದಿ ಕಾಂಗ್ರೆಸ್ ಸೇರಿ ಬಿಜೆಪಿ ಬೆನ್ನಿಗೆ ಚೂರಿ ಹಾಕಿದ್ದೀರಿ ಎಂದು ಆರೋಪಿಸಿರುವ ನೀವು (ಯಡಿಯೂರಪ್ಪ) 2013ರಲ್ಲಿ ಕೆಜೆಪಿ ಆರಂಭಿಸಿದಾಗ ಬಿಜೆಪಿಯ ಎದೆಗೆ ಚೂರಿ ಹಾಕಿಲ್ಲವೇ ಎಂದು ಪ್ರಶ್ನಿಸಿದರು.

ಇದು ವೀರಶೈವ-ಲಿಂಗಾಯತ ಸಮುದಾಯಕ್ಕೆ ತವರು ಮನೆಯಾಗಿದ್ದು, ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 130-140 ಸ್ಥಾನಗಳನ್ನು ಗೆಲ್ಲಲಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ:  ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಎಂ.ಬಿ ಪಾಟೀಲ್ ನೇಮಕ: ಹೊಸ ಜವಾಬ್ದಾರಿ ಧರ್ಮ ವಿಭಜನೆಗೆ ಪ್ರೇರಣೆ ನೀಡದಿರಲಿ- ಬಿಜೆಪಿ

1990ರಲ್ಲಿ ಸಮುದಾಯದ ನಾಯಕ ವೀರೇಂದ್ರ ಪಾಟೀಲ್ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದ ಕಾಂಗ್ರೆಸ್ ನಿರ್ಧಾರವನ್ನು ಪಾಟೀಲ್ ಸಮರ್ಥಿಸಿಕೊಂಡರು, ಅವರು ಅನಾರೋಗ್ಯದಿಂದ ಬಳಲುತ್ತಿದ್ದರು ಎಂದು ಹೇಳಿದರು. ಆದರೆ, ಯಡಿಯೂರಪ್ಪನವರು ಚೆನ್ನಾಗಿದ್ದರೂ ಬಿಜೆಪಿ ಅವರನ್ನು ಏಕೆ ಅಧಿಕಾರದಿಂದ ಕೆಳಗಿಳಿಸಿತು ಎಂದು ಪ್ರಶ್ನಿಸಿದರು.

ಬಿಜೆಪಿ ಪ್ರಚಾರದ ನೇತೃತ್ವ ವಹಿಸಲು ರಾಜ್ಯದಲ್ಲಿ ಬಿಜೆಪಿ ನಾಯಕರಿಲ್ಲದ ಕಾರಣ ಮೋದಿ ಶಾ ಅವರನ್ನು ಕರ್ನಾಟಕದ ಖಾಯಂ ನಿವಾಸಿಯನ್ನಾಗಿ ಮಾಡಿದ್ದಾರೆ ಎಂದು ಅವರು ಹೇಳಿದರು.

ಶೆಟ್ಟರ್ ಮತ್ತು ಸವದಿ ಅವರನ್ನು ಸೋಲಿಸಲು ಯಡಿಯೂರಪ್ಪ ಅವರನ್ನು ನಿಯೋಜಿಸಲಾಗಿದೆ. ಯಡಿಯೂರಪ್ಪ ಅವರು ತಮ್ಮ ಇಬ್ಬರು ಮಕ್ಕಳ ರಾಜಕೀಯ ಭವಿಷ್ಯದ ಬಗ್ಗೆ ಹೆದರಿ ಈ ಕೆಲಸಕ್ಕೆ ಕೈ ಹಾಕಿದ್ದಾರೆ ಎಂದು ದೂರಿದ್ದಾರೆ.

LEAVE A REPLY

Please enter your comment!
Please enter your name here