ಬೆಂಗಳೂರು:
ರಾಜ್ಯದಲ್ಲಿರುವ ಮಠ, ಮಂದಿರಗಳು ಹಾಗೂ ಸಂಘ ಸಂಸ್ಥೆಗಳಿಗೆ ಒಟ್ಟು 23.95 ಕೋಟಿ ರೂಪಾಯಿ ಅನುದಾನವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಕರ್ನಾಟಕ ಸರ್ಕಾರ ಬಿಡುಗಡೆ ಮಾಡಿದೆ.
ಒಟ್ಟು 55 ಮಠಗಳು, 81 ದೇಗುಲಗಳು, 25 ಸಂಘ ಸಂಸ್ಥೆಗಳಿಗೆ ಒಟ್ಟು 23.95 ಕೋಟಿ ಬಿಡುಗಡೆಯಾಗಿದೆ. ಕೆಲವು ತಿಂಗಳ ಹಿಂದೆಯಷ್ಟೇ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಆಲಗೂರು ಗ್ರಾಮದಲ್ಲಿ ಸ್ಥಾಪನೆಯಾಗಿದ್ದ ವೀರಶೈವ ಲಿಂಗಾಯತ ಪಂಚಮಸಾಲಿ ಮಠದ 3ನೇ ಪೀಠಕ್ಕೂ ಅನುದಾನ ಬಿಡುಗಡೆಯಾಗಿದೆ.