ಬೆಂಗಳೂರು: ರಾಜ್ಯದಲ್ಲಿ 24 ಗಂಟೆಗಳ ಅವಧಿಯಲ್ಲಿ ಸುಮಾರು 51 ಮಂದಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಪ್ರಕರಣ ಹಿನ್ನೆಲೆಯಲ್ಲಿ ಸಂಚಾರಿ ನಿಯಮಗಳ ಉಲ್ಲಂಘನೆ, ಅತೀ ವೇಗ ಮತ್ತು ನಿರ್ಲಕ್ಷ್ಯದ ಚಾಲನೆಯೇ ಈ ಅಪಘಾತಕ್ಕೆ ಕಾರಣ ಎಂದು ರಾಜ್ಯ ಸಂಚಾರ ಹಾಗೂ ರಸ್ತೆ ಸುರಕ್ಷತೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ.
ರವಿವಾರ ಈ ಬಗ್ಗೆ ಎಕ್ಸ್ ನಲ್ಲಿ ಕಳವಳ ವ್ಯಕ್ತಪಡಿಸಿರುವ ಅವರು, ವೇಗ ಹಾಗೂ ಅಜಾಗರೂಕತೆಯ ವಾಹನ ಚಾಲನೆ ಅಪಾಯಕಾರಿ ಎಂಬ ಅರಿವಿದ್ದರೂ ನಿರ್ಲಕ್ಷ್ಯದಿಂದಾಗಿ ಇತ್ತೀಚೆಗೆ ಅಪಘಾತ, ಸಾವು-ನೋವು ಪ್ರಕರಣಗಳು ಹೆಚ್ಚುತ್ತಿವೆ ಎಂದಿದ್ದಾರೆ.
6 persons killed in Hassan car accident
— alok kumar (@alokkumar6994) May 26, 2024
In last 24 hrs 51 lives lost in road accidents , one of the highest toll in recent past
Many of these caused due to rash & reckless driving
“#Roadsafety needs responsible behaviour from all the stakeholders” pic.twitter.com/JHYy1vC3CJ
24 ಗಂಟೆಗಳ ಅವಧಿಯಲ್ಲಿ ರಸ್ತೆ ಅಪಘಾತಗಳಲ್ಲಿ 51 ಜೀವಗಳು ಸಾವನ್ನಪ್ಪಿವೆ. ಇದು ಇತ್ತೀಚೆಗೆ ಸಂಭವಿಸಿದ ಅತೀ ಹೆಚ್ಚಿನ ಸಾವುನೋವಿನ ಪ್ರಕರಣವಾಗಿದೆ. ಇವುಗಳಲ್ಲಿ ಹೆಚ್ಚಿನವು ಅಜಾಗರೂಕತೆಯ ಚಾಲನೆಯಿಂದ ಸಂಭವಿಸಿವೆ. ರಸ್ತೆ ಸುರಕ್ಷತೆಗೆ ಎಲ್ಲರೂ ಜವಾಬ್ದಾರಿಯುತ ನಡವಳಿಕೆ ತೋರಬೇಕು ಎಂದು ಅವರು ಮನವಿ ಮಾಡಿದ್ದಾರೆ.
ಮೇ 26ರ ರವಿವಾರ ಚಿಕ್ಕೋಡಿ, ಹಾಸನ, ಉತ್ತರ ಕನ್ನಡ ಹಾಗೂ ರಾಮನಗರ ಸೇರಿ ರಾಜ್ಯದ ಹಲವೆಡೆ ಒಂದೇ ದಿನದಲ್ಲಿ ಭೀಕರ ರಸ್ತೆ ಅಪಘಾತಗಳು ಸಂಭವಿಸಿ 51 ಮಂದಿ ಪ್ರಾಣ ಕಳೆದುಕೊಂಡಿದ್ದರು.