Home ಬೆಂಗಳೂರು ನಗರ 7ನೇ ವೇತನ ಆಯೋಗ ವರದಿ ಕಡೆಗಣನೆ ಹಿನ್ನೆಲೆ: ಸರ್ಕಾರದ ನಡೆ ವಿರುದ್ಧ ಮಹಾನಗರ ಪಾಲಿಕೆ ನೌಕರರ...

7ನೇ ವೇತನ ಆಯೋಗ ವರದಿ ಕಡೆಗಣನೆ ಹಿನ್ನೆಲೆ: ಸರ್ಕಾರದ ನಡೆ ವಿರುದ್ಧ ಮಹಾನಗರ ಪಾಲಿಕೆ ನೌಕರರ ಆಕ್ರೋಶ

61
0
BBMP employees Union Amruth Raj
ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಎ.ಅಮೃತ್ ರಾಜ್

ಸುದ್ದಿ ಮೂಲ: ಪತ್ರಕರ್ತ ಶೇಷ ನಾರಾಯಣ

ಬೆಂಗಳೂರು:

7ನೇ ವೇತನ ಆಯೋಗದ ವರದಿ ಜಾರಿ ವಿಚಾರದಲ್ಲಿ ರಾಜ್ಯ ಸರ್ಕಾರ, ‘ಒಂದು ಕಣ್ಣಿಗೆ ಬೆಣ್ಣೆ ಮತ್ತೊಂದು ಕಣ್ಣಿಗೆ ಸುಣ್ಣ’ಎಂಬಂತೆ ನಡೆದುಕೊಂಡಿದೆ. ಸರ್ಕಾರ ನಡೆ ವಿರುದ್ಧ ರಾಜ್ಯದ 10 ಮಹಾನಗರ ಪಾಲಿಕೆ ನೌಕರರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಆದ್ದರಿಂದ, ಬರುವ ದಿನಗಳಲ್ಲಿ ರಾಜ್ಯಾದ್ಯಂತ ಕೆಲಸ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ ಎಂದು ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಎ.ಅಮೃತ್ ರಾಜ್ ರವರು ಹೇಳಿದರು.

7ನೇ ವೇತನ ಜಾರಿಗೆ ಆಗ್ರಹಿಸಿ ಸರ್ಕಾರಿ ನೌಕರರು ಮಾ.1ರಂದು ಕರೆ ನೀಡಿದ್ದ ಮುಷ್ಕರದಲ್ಲಿ ಮಹಾನಗರ ಪಾಲಿಕೆ ನೌಕರರು ಭಾಗಿಯಾಗಿ ತೀವ್ರ ಪ್ರತಿಭಟನೆ ನಡೆಸಿತ್ತು. ಅದರೆ, ಮಹಾನಗರ ಪಾಲಿಕೆ ನೌಕರರನ್ನು ಹೊರಗಿಟ್ಟ ರಾಜ್ಯ ಸರ್ಕಾರ, ಬರೀ ಸರ್ಕಾರಿ ನೌಕರರಿಗೆ ಮಾತ್ರ ಅನ್ವಯವಾಗುವಂತೆ ಮಾ.1ರಿಂದ ಜಾರಿಗೆ ಬರುವಂತೆ ಶೇ.17 ಮಧ್ಯಂತರ ಪರಿಹಾರ ಮಂಜೂರು ಮಾಡಿ ಆದೇಶ ಹೊರಡಿಸಿತ್ತು.

ಇದೇ ವೇಳೆ ಮಹಾನಗರ ಪಾಲಿಕೆ ನೌಕರರಿಗೆ ಮತ್ತು ಪುರಸಭೆ/ನಗರಸಭೆ ನೌಕರರಿಗೆ ಪ್ರತ್ಯೇಕವಾಗಿ ಮಂಜೂರಾತಿಗೆ ನಗರಾಭಿವೃದ್ಧಿ ಹಾಗೂ ಪೌರಾಡಳಿತ ಇಲಾಖೆಯಿಂದ ಅನುಮತಿ ಪಡೆಯುವಂತೆ ಸರ್ಕಾರ ಆದೇಶಿಸಿತ್ತು. ಈ ಆದೇಶವನ್ನು ಅನುಷ್ಠಾನಕ್ಕೆ ತರುವಂತೆ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ಹಾಗೂ ಪೌರಾಡಳಿತ ಇಲಾಖೆ ನಿರ್ದೇಶಕರಿಗೆ ಎರಡು ತಿಂಗಳಿಂದ ಸತತವಾಗಿ ಮನವಿ ಪತ್ರ ನೀಡಿದ್ದರೂ ಇದಕ್ಕೆ ಸ್ಪಂದಿಸುತ್ತಿಲ್ಲ ಎಂದು ಅಮೃತ್ ರಾಜ್ ರವರು ಹೇಳಿದರು.

ಮಾ.1ರಂದು ಕರೆ ನೀಡಿದ್ದ ಮುಷ್ಕರದಲ್ಲಿ ಸರ್ಕಾರಿ ನೌಕರರು ಗೈರಾಗಿ ಮನೆಯಲ್ಲಿದ್ದರು. ಆದರೆ, ಮಹಾನಗರ ಪಾಲಿಕೆ ನೌಕರರು ರಾಜ್ಯಾದ್ಯಂತ ಬೀದಿಗಿಳಿದು ಹೋರಾಟ ಮಾಡಿದ್ದರಿಂದ ಸರ್ಕಾರಿ ನೌಕರರಿಗೆ ಮಾತ್ರ ಇದರ ಲಾಭ ಸಿಗುವಂತಾಗಿದೆ. ಆದರೆ, ನ್ಯಾಯಯುತವಾಗಿ ಸಿಗಬೇಕಿದ್ದ ಮಧ್ಯಂತರ ಪರಿಹಾರದಲ್ಲಿ ನಮ್ಮನ್ನು ಕಡೆಗಣಿಸಲಾಗಿದೆ. ಆದ್ದರಿಂದ, ಬರುವ ದಿನಗಳಲ್ಲಿ ರಾಜ್ಯಾದ್ಯಂತ ಕೆಲಸ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಅಮೃತ್ ರಾಜ್ ರವರು ಹೇಳಿದರು.

LEAVE A REPLY

Please enter your comment!
Please enter your name here