Home ಅಪರಾಧ ಬೆಂಗಳೂರಿನಲ್ಲಿ ಕಾರು ಅಪಘಾತ ಮಾಡಿ ಯುವಕನ ಕಗ್ಗೊಲೆ

ಬೆಂಗಳೂರಿನಲ್ಲಿ ಕಾರು ಅಪಘಾತ ಮಾಡಿ ಯುವಕನ ಕಗ್ಗೊಲೆ

32
0

ಬೆಂಗಳೂರು: ಹೆದ್ದಾರಿಯಲ್ಲಿ ಕಾರು ಅಪಘಾತ ಮಾಡಿ ಯುವಕನೋರ್ವನನ್ನು ಕೊಲೆ ಮಾಡಿ ಹಂತಕರು ಎಸ್ಕೇಪ್ ಆದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನಡೆದಿದೆ.

ಹೊಸಕೋಟೆ ತಾಲೂಕಿನ ಗಂಗಾಪುರ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ ನಡೆದಿದೆ. ಭಾರ್ಗವ್ (24) ಕೊಲೆಯಾದ ಯುವಕ.

ಈತ ಕೋಲಾರ ಮೂಲದವನಾಗಿದ್ದು, ತಡರಾತ್ರಿ ಕೋಲಾರದಿಂದ ಹೊಸಕೋಟೆ ಕಡೆಗೆ ಕಾರಿನಲ್ಲಿ ಬರುತ್ತಿದ್ದ. ಈ ವೇಳೆ ಹಂತಕರು ಕಾರು ಚೇಸ್ ಮಾಡಿ ಬ್ರೇಕ್ ಹಾಕಿದ್ದಾರೆ. ಪರಿಣಾಮ ಕಾರಿನ ಮುಂಭಾಗ ಹಂತಕರ ಕಾರಿಗೆ ಡಿಕ್ಕಿಯಾಗಿದೆ. ಇದೇ ನೆಪದಲ್ಲಿ ಗಲಾಟೆ ಮಾಡಿ ಲಾಂಗು, ಮಚ್ಚಿನಿಂದ ಹಲ್ಲೆ ನಡೆಸಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here