
ಬೆಂಗಳೂರು:
ಭಾರತೀಯ ಸಶಸ್ತ್ರ ಪಡೆಗಳಲ್ಲಿ ಉದ್ಯೋಗ ನೀಡುವುದಾಗಿ ಭರವಸೆ ನೀಡಿ 150 ಯುವಕರಿಗೆ 1 ಕೋಟಿ ರೂ. ವಂಚಿಸಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಹುಬ್ಬಳ್ಳಿ ನಿವಾಸಿ ಶಿವರಾಜ್ ವಟಗಲ್ (40) ಬಂಧಿತ ಆರೋಪಿ. ಶಿವರಾಜ್ ವಟಗಲ್ ಭಾರತೀಯ ಸೇನೆಯಲ್ಲಿ ಕಾರ್ಯನಿರ್ವಹಿಸಿದ್ದನು.
ಭಾರತೀಯ ಸೇನೆ, ವಾಯುಸೇನೆ ಮತ್ತು ನೌಕಾಪಡೆ, ಕರ್ನಾಟಕದ ವಿವಿಧ ಜಿಲ್ಲೆಗಳಾದ ಚಿತ್ರದುರ್ಗ, ದಾವಣಗೆರೆ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಉದ್ಯೋಗವನ್ನು ಒದಗಿಸುತ್ತೇನೆ” ಎಂದು ಶಿವರಾಜ್ ವಟಗಲ್ ಮತ್ತು ಆತನ ಸಹಚರರು 150 ಯುವಕರಿಗೆ 1 ಕೋಟಿ ರೂ. ವಂಚಿಸಿದ್ದಾನೆ. ಈ ಸಂಬಂಧ ದಾವಣಗೆರೆ ಜಿಲ್ಲೆಯ ಪ್ರಕಾಶ್ (31) ಎಂಬುವರು ಶಿವರಾಜ್ ವಟಗಲ್ ವಿರುದ್ಧ ಚಿತ್ರದುರ್ಗದ ಶ್ರೀರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣಕ್ಕೆ ದೂರು ದಾಖಲಿಸಿದ್ದರು.
ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮತ್ತು ಮಿಲಿಟರಿ ಗುಪ್ತಚರ ಜಂಟಿಯಾಗಿ ಕಾರ್ಯಾಚರಣೆ ಇಳಿದಿತ್ತು. ಅಕ್ಟೋಬರ್ 20 ರಂದು ಮಿಲಿಟರಿ ಗುಪ್ತಚರ, ಬೆಂಗಳೂರು ಮತ್ತು ಚಿತ್ರದುರ್ಗ ಜಿಲ್ಲೆಯ ಶ್ರೀರಾಂಪುರ ಪೊಲೀಸ್ ತಂಡವು ಜಂಟಿ ಕಾರ್ಯಾಚರಣೆ ನಡೆಸಿ ಚಿತ್ರದುರ್ಗದಲ್ಲಿ ವಂಚಕ ಶಿವರಾಜ್ ಮತ್ತು ಆತನ ಸಹಚರ ಭೀಮವ್ವರನ್ನು ಬಂಧಿಸಿದರು.
ವಂಚಕ ಶಿವರಾಜ್ ಮತ್ತು ಆತನ ಸಹಚರ ಬೀಮವ್ವ ವಿರುದ್ಧ ಶ್ರೀರಾಂಪುರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ವಂಚಕ ಶಿವರಾಜ್ ನಕಲಿ ನಕಲಿ ಗುರುತಿನ ಚೀಟಿಗಳು ಮತ್ತು ಸೇನಾ ನೇಮಕಾತಿ ಸಂಬಂಧಿತ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ.