ಬೆಂಗಳೂರು:
ಬೆಂಗಳೂರನ್ನು ಸ್ಟಾರ್ಟ್ ಅಪ್ ರಾಜಧಾನಿಯಾಗಿಸಿದಂತೆ ರಾಜ್ಯವನ್ನು ಡಿಜಿಟಲ್ ಆರ್ಥಿಕತೆಯ (ಫಿನ್ ಟೆಕ್-ಫೈನಾನ್ಶಿಯಲ್ ಟೆಕ್ನಾಲಜಿ) ರಾಜಧಾನಿಯಾಗಿಸಲು ಬೇಕಾದ ಎಲ್ಲಾ ಕ್ರಮ ವಹಿಸಲಾಗುವುದು ಎಂದು ಗ್ರಾಮೀಣ ಅಭಿವೃದ್ಧಿ ಹಾಗೂ ಮಾಹಿತಿ ತಂತ್ರಜ್ಞಾನ ಇಲಾಖೆಯ ಸಚಿವರಾದ ಶ್ರೀ ಪ್ರಿಯಾಂಕ್ ಖರ್ಗೆತಿಳಿಸಿದರು.
ಅವರು ಇಂದು ಮಾಹಿತಿ ಹಾಗೂ ತಂತ್ರಜ್ಞಾನ ಇಲಾಖೆಯ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದರು.
ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ ಅಡಿಯಲ್ಲಿ ರಾಜ್ಯಾದ್ಯಂತ ಡಿಜಿಟಲ್ ಆರ್ಥಿಕತೆಯನ್ನು ಉತ್ತೇಜಿಸಲು, ಬೆಂಗಳೂರು ಸೇರಿದಂತೆ ಬೆಳಗಾವಿ, ಮೈಸೂರು, ಮಂಗಳೂರಿನಂತಹ ನಗರಗಳಲ್ಲೂ ನವೋದ್ಯಮ ಸ್ನೇಹಿ ವಾತಾವರಣ ನಿರ್ಮಿಸಿ, ಅಲ್ಲಿನ ಫಿನ್ ಟೆಕ್ ಕಂಪನಿಗಳನ್ನು ಯುನಿಕಾರ್ನ್ ಸಂಸ್ಥೆಗಳಾಗಿ ಬೆಳೆಸಲು ಸರ್ಕಾರ ವಿಶೇಷ ಕಾಳಜಿ ವಹಿಸಲಿದ್ದು, ಬೆಂಗಳೂರನ್ನು ಸ್ಟಾರ್ಟ್ ಅಪ್ ರಾಜಧಾನಿಯಾಗಿಸಿದಂತೆ ರಾಜ್ಯವನ್ನು ಡಿಜಿಟಲ್ ಆರ್ಥಿಕತೆಯ (ಫಿನ್ ಟೆಕ್-ಫೈನಾನ್ಶಿಯಲ್ ಟೆಕ್ನಾಲಜಿ) ರಾಜಧಾನಿಯಾಗಿಸಲು ಬೇಕಾದ ಎಲ್ಲಾ ಕ್ರಮ ವಹಿಸಲಾಗುವುದು ಎಂದು ಗ್ರಾಮೀಣ ಅಭಿವೃದ್ಧಿ ಹಾಗೂ ಮಾಹಿತಿ ತಂತ್ರಜ್ಞಾನ ಇಲಾಖೆಯ ಸಚಿವರಾದ ಶ್ರೀ ಪ್ರಿಯಾಂಕ್ ಖರ್ಗೆತಿಳಿಸಿದರು.