ಬೆಂಗಳೂರು:
ತಮಿಳು ನಾಡು ಮುಜರಾಯಿ ಖಾತೆ ಸಚಿವ P ಸೇಕರ್ ಅವರ ಪುತ್ರಿ ಶ್ರೀಮತಿ ಜಯ ಕಲ್ಯಾಣಿ (೨೪) ಹಾಗೂ ಅವರ ಪತಿ ಶ್ರಿ ಸತೀಶ್ ಅವರು ಇಂದು ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ ಅವರನ್ನು ಭೇಟಿಯಾಗಿ, ಪೊಲೀಸ್ ರಕ್ಷಣೆ ಒದಗಿಸಬೇಕು ಎಂದು ವಿನಂತಿಸಿ ಕೊಂಡಿದ್ದಾರೆ.
ಸಚಿವರನ್ನು ಭೇಟಿಯಾಗುವ ಪೂರ್ವದಲ್ಲಿ, ಈರ್ವರೂ ನಗರ ಪೊಲೀಸ್ ಆಯುಕ್ತರನ್ನು ಭೇಟಿಯಾಗಿ ರಕ್ಷಣೆಗಾಗಿ ಮನವಿ ಸಲ್ಲಿಸಿದ್ದರು.
ತನ್ನನ್ನು ಎಂ ಬಿ ಬಿ ಎಸ್ ಪದವೀಧರೆ ಎಂದು ಪರಿಚಯಿಸಿಕೊಂಡ ಜಯ ಕಲ್ಯಾಣಿ ಅವರು, ನಾವಿಬ್ಬರೂ ಪರಸ್ಪರ ಒಪ್ಪಿಗೆ ಮೂಲಕ ವಿವಾಹವಾಗಿದ್ದು, ತಮ್ಮ ಪತಿಯವರ ವಿರುಧ್ದ ಸತ್ಯಕ್ಕೆ ದೂರವಾದ ದೂರು ದಾಖಲಿಸುವ ಪ್ರಯತ್ನದ ಬಗ್ಗೆ, ಅನುಮಾನವಿದ್ದು, ರಕ್ಷಣೆ ನೀಡಬೇಕೆಂದು ವಿನಂತಿಸಿದರು.