 
        Image Source: https://www.lingayatreligion.com/Sharanaru/Allama_Prabhu
ಶಿವಮೊಗ್ಗ:
ಅನುಭವ ಮಂಟಪದ ಅಧ್ಯಕ್ಷರಾಗಿ ಪ್ರಜಾಪ್ರಭುತ್ವದ ಪರಿಕಲ್ಪನೆಯನ್ನು ಮೊದಲಿಗೆ ಈ ನೆಲದಲ್ಲಿ ಸ್ಥಾಪಿಸಿದ ಅಲ್ಲಮಪ್ರಭುವಿನ ಹೆಸರನ್ನು ಶಿವಮೊಗ್ಗದ ಫ್ರೀಡಂ ಪಾರ್ಕಿಗೆ ಇಡುತ್ತೇವೆ ಎಂದು ಯುವನಿಧಿ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು.
ಶಿವಮೊಗ್ಗ ಜಿಲ್ಲೆಯವರೇ ಆದ ಬಸವಾದಿ ಶರಣ ಅಲ್ಲಮ ಪ್ರಭುವಿಗೆ ನಮ್ಮ ಕಾಂಗ್ರೆಸ್ ಸರ್ಕಾರ ಕೊಡುವ ಗೌರವ ಎಂದು ಈಸಂದರ್ಭದಲ್ಲಿ ಬಣ್ಣಿಸಿದರು.
ಮುಖ್ಯಮಂತ್ರಿಗಳು ಅಲ್ಲಮ ಪ್ರಭುವಿನ ಹೆಸರನ್ನು ಘೋಷಿಸುತ್ತಿದ್ದಂತೆ ನೆರೆದಿದ್ದ ಲಕ್ಷಾಂತರ ಮಂದಿ ಕುಳಿತಿದ್ದ ಕುರ್ಚಿಗಳಿಂದ ಮೇಲೆದ್ದು ಚಪ್ಪಾಳೆ ತಟ್ಟಿ, ಕೂಗಿ ಸಂಭ್ರಮದಿಂದ ಸ್ವಾಗತಿಸಿದರು.

 
         
        