ದಾವಣಗೆರೆ;- ವಾಹನ ಸವಾರರು ಸಂಚಾರಿ ನಿಯಮ ಉಲ್ಲಂಘಿಸಿದ್ರೆ, ಮನೆಗೆ ಹೋಗಿ ವಸೂಲಿ ಮಾಡಿ ಎಂದು ಅಲೋಕ್ ಕುಮಾರ್ ಸೂಚನೆ ನೀಡಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು, ನಿಯಮ ಉಲ್ಲಂಘಿಸಿ ದಂಡ ಕಟ್ಟದ ವ್ಯಕ್ತಿಗಳನ್ನು ಗುರುತಿಸಿ ಅವರ ಮನೆಗೆ ತೆರಳಿ ದಂಡ ವಸೂಲಿ ಮಾಡುವಂತೆ ಪೊಲೀಸ್ ಸಿಬ್ಬಂದಿಗೆ ಸೂಚನೆ ನೀಡಿದರು.
ಕಳೆದ ವರ್ಷ ರಸ್ತೆ ದುರಂತದಲ್ಲಿ ಹನ್ನೊಂದಯ ಸಾವಿರ ನಾಲ್ಕು ಜನ ಸಾವನ್ನಪ್ಪಿದ್ದಾರೆ. ಇದರಲ್ಲಿ ಶೇ. 60ಕ್ಕೂ ಹೆಚ್ಚು ಜನ ದ್ವಿಚಕ್ರ ವಾಹನ ಸವಾರರಾಗಿದ್ದಾರೆ. ಇದೇ ಕಾರಣಕ್ಕೆ ಹೆಲ್ಮೆಟ್ ಕಡ್ಡಾಯವಾಗಿ ಧರಿಸಬೇಕು. ಬೆಂಗಳೂರಿಗಿಂತ ಚೆನ್ನೈನಲ್ಲಿ ಬಿಸಿಲು ಜಾಸ್ತಿ. ಆದರೆ ಚೆನ್ನೈನಲ್ಲಿ ಜಾಸ್ತಿ ಹೆಲ್ಮೆಟ್ ಧರಿಸುತ್ತಾರೆ ಎಂದರು.
ಗಾಂಜಾ ಸೇರಿದಂತೆ ಮಾದಕ ವಸ್ತುಗಳ ಪೂರೈಕೆ ಜಾಗತಿಮಟ್ಟದಲ್ಲಿ ಹೆಚ್ಚಾಗುತ್ತಿದೆ. ಅಫಘಾನಿಸ್ತಾನದಂತಹ ಇಂತಹ ಮಾದಕ ವಸ್ತುಗಳ ಉತ್ಪಾದನೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆ ರಾಜ್ಯದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿದೆ. ಜೊತೆಗೆ ಗಾಂಜಾ ಪೂರೈಕೆ ಆಗುತ್ತಿರುವ ಖಚಿತ ಮಾಹಿತಿ ಇದ್ದರೆ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಬೇಕು ಎಂದು ಮನವಿ ಮಾಡಿದರು.
The post Alok Kumar; ಸಂಚಾರಿ ನಿಯಮ ಉಲ್ಲಂಘಿಸಿದ್ರೆ, ಮನೆಗೆ ಹೋಗಿ ವಸೂಲಿ ಮಾಡಿ – ಅಲೋಕ್ ಕುಮಾರ್ ಸೂಚನೆ appeared first on Ain Live News.