Home ಬೆಂಗಳೂರು ನಗರ ಬಿಬಿಎಂಪಿ ಲ್ಯಾಬ್ ನಲ್ಲಿ ಅಗ್ನಿ ಅವಘಡ ಪ್ರಕರಣ: ಚಿಕಿತ್ಸೆ ಫಲಿಸದೆ BBMP ಮುಖ್ಯ ಅಭಿಯಂತರರಾದ ಶಿವಕುಮಾರ್...

ಬಿಬಿಎಂಪಿ ಲ್ಯಾಬ್ ನಲ್ಲಿ ಅಗ್ನಿ ಅವಘಡ ಪ್ರಕರಣ: ಚಿಕಿತ್ಸೆ ಫಲಿಸದೆ BBMP ಮುಖ್ಯ ಅಭಿಯಂತರರಾದ ಶಿವಕುಮಾರ್ ಸಾವು; ಡಿಸಿಎಂ ಡಿ.ಕೆ. ಶಿವಕುಮಾರ್ ಸಂತಾಪ

415
0
Advertisement
bengaluru

ಬೆಂಗಳೂರು:

ಬಿಬಿಎಂಪಿ ಕೇಂದ್ರ ಕಚೇರಿಯ ಲ್ಯಾಂಬ್ ನಲ್ಲಿ ಸಂಭವಿಸಿದ್ದ ಅಗ್ನಿ ಅವಘಡದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮುಖ್ಯ ಅಭಿಯಂತರರಾದ ಶಿವಕುಮಾರ್ (48) ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ಅಗ್ನಿ ಅವಘಡದ ವೇಳೆ ರಾಸಾಯನಿಕ ಗಾಳಿ ಉಸಿರಾಡಿದ ಪರಿಣಾಮ ತೀವ್ರತರ ಉಸಿರಾಟ ಸಮಸ್ಯೆಯಿಂದ ಶಿವಕುಮಾರ್ ಬಳಲುತ್ತಿದ್ದು ಬೆಂಗಳೂರಿನ ಶೇಷಾದ್ರಿಪುರಂನಲ್ಲಿರುವ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಸಂಜೆ ಅವರು ಮೃತಪಟ್ಟಿದ್ದಾರೆ.

ಆಗಸ್ಟ್ 11ರಂದು ಸಂಜೆ 5 ಗಂಟೆ ಸುಮಾರಿಗೆ ಅಗ್ನಿ ಅವಘಡ ಸಂಭವಿಸಿದ್ದು ಬಿಬಿಎಂಪಿ ಏಳು ಸಿಬ್ಬಂದಿಗೆ ಸುಟ್ಟಗಾಯಗಳಾಗಿತ್ತು.

bengaluru bengaluru
1000707059

ಡಿಸಿಎಂ ಡಿ.ಕೆ. ಶಿವಕುಮಾರ್ ಸಂತಾಪ

ಬಿಬಿಎಂಪಿ ಗುಣಮಟ್ಟದ ಪರೀಕ್ಷಾ ಪ್ರಯೋಗಾಲಯ ಅಗ್ನಿ ದುರಂತಕ್ಕೆ ಸಿಲುಕಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಿಬಿಎಂಪಿ ಮುಖ್ಯ ಇಂಜಿನಿಯರ್ ಶಿವಕುಮಾರ್ ಅವರ ನಿಧನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸಂತಾಪ ಸೂಚಿಸಿದ್ದಾರೆ.

“ಮುಖ್ಯ ಇಂಜಿನಿಯರ್ ಶಿವಕುಮಾರ್ ಅವರ ಅಗಲಿಕೆ ಸುದ್ದಿ ಕೇಳಿ ಬೇಸರವಾಗಿದೆ. ಕೆಲ ದಿನಗಳ ಹಿಂದಷ್ಟೇ ನಾನು ಆಸ್ಪತ್ರೆಗೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದ್ದೆ. ವೈದ್ಯರು ಉತ್ತಮ ಚಿಕಿತ್ಸೆ ನೀಡಿದರೂ ಅವರ ಸ್ಥಿತಿ ಚಿಂತಾಜನಕವಾಗಿತ್ತು. ಅವರು ಗುಣಮುಖರಾಗಲಿ ಎಂದು ಪ್ರಾರ್ಥನೆ ಸಲ್ಲಿಸಿದ್ದೆವು. ನಮ್ಮ ಪ್ರಾರ್ಥನೆ ಫಲ ನೀಡಲಿಲ್ಲ.

ಚಿಕ್ಕ ವಯಸ್ಸಿನಲ್ಲಿ ಈ ಅವಘಡದಿಂದ ಪ್ರಾಣ ಕಳೆದುಕೊಂಡಿರುವುದು ಮನಸ್ಸಿಗೆ ನೋವು ಉಂಟು ಮಾಡಿದೆ. ಶಿವಕುಮಾರ್ ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಅಗಲಿಕೆ ನೋವನ್ನು ಭರಿಸುವ ಶಕ್ತಿ ಅವರ ಕುಟುಂಬ ಸದಸ್ಯರು ಹಾಗೂ ಬಂಧು ಮಿತ್ರರಿಗೆ ಕರುಣಿಸಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ” ಎಂದು ಡಿ.ಕೆ. ಶಿವಕುಮಾರ್ ಅವರು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.


bengaluru

LEAVE A REPLY

Please enter your comment!
Please enter your name here