Home ಆರೋಗ್ಯ ಕೋವಿಡ್‌ ನಿಯಂತ್ರಿಸಲು ಮನೆ ಬಾಗಿಲಿಗೆ ಬಿಬಿಎಂಪಿ ವೈದ್ಯರ ತಂಡ: ಸಮೀಕ್ಷೆಗೆ ಆಶೋಕ್‌ ಚಾಲನೆ

ಕೋವಿಡ್‌ ನಿಯಂತ್ರಿಸಲು ಮನೆ ಬಾಗಿಲಿಗೆ ಬಿಬಿಎಂಪಿ ವೈದ್ಯರ ತಂಡ: ಸಮೀಕ್ಷೆಗೆ ಆಶೋಕ್‌ ಚಾಲನೆ

91
0

ಬೆಂಗಳೂರು:

ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ನಗರದಲ್ಲಿ ‘ಪಾಲಿಕೆ ವೈದ್ಯರು ನಿಮ್ಮ ಮನೆ ಬಾಗಿಲಿಗೆ’ ಎಂಬ ವಿನೂತನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಮೊದಲನೇ ಹಂತದಲ್ಲಿ 27 ವಿಧಾನಸಭಾ ಕ್ಷೇತ್ರಗಳ 54 ವಾರ್ಡ್ಗಳಲ್ಲಿ ಹಮ್ಮಿಕೊಳ್ಳಲಾಗಿದೆ. ಜನರ ಮನೆಬಾಗಿಲಿಗೆ ಭೇಟಿ ನೀಡಿ, ಸಮಗ್ರ ಮಾಹಿತಿ ಕಲೆ ಹಾಕುವ ಸಮೀಕ್ಷೆಗೆ ಕಂದಾಯ ಸಚಿವ ಆರ್.ಅಶೋಕ್ ಸೋಮವಾರ ಚಾಲನೆ ನೀಡಿದರು.

ನಗರದ 29 ಲಕ್ಷ ಮನೆಗಳಿಗೂ ಭೇಟಿನೀಡಿ ಆರೋಗ್ಯ ತಪಾಸಣೆ ನಡೆಸುವುದು ಪಾಲಿಕೆಯ ಗುರಿಯಾಗಿದೆ ಎಂದು ಮಾನ್ಯ ಕಂದಾಯ ಸಚಿವರು ಆರ್.ಅಶೋಕ್ ರವರು ತಿಳಿಸಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಗರದಲ್ಲಿ ಕೋವಿಡ್ ಸೋಂಕನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ದೃಷ್ಟಿಯಿಂದ ಈ ಆರೋಗ್ಯ ಸಮೀಕ್ಷೆ ಹಮ್ಮಿಕೊಳ್ಳಲಾಗಿದೆ. ಭವಿಷ್ಯದಲ್ಲಿ ಯಾರಿಗಾದರೂ ಕೊರೊನಾ ಸೋಂಕು ದೃಢಪಟ್ಟರೆ ತಕ್ಷಣ ಅವರಿಗೆ ಸೂಕ್ತ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲು ಇದು ನೆರವಾಗಲಿದೆ ಎಂದರು.

ಉದಾಹರಣೆಗೆ, ಕ್ಯಾನ್ಸರ್‌ ಇದ್ದ ವ್ಯಕ್ತಿಗೆ ಕೋವಿಡ್‌ ದೃಢಪಟ್ಟರೆ ಅವರನ್ನು ಕ್ಯಾನ್ಸರ್‌ ಚಿಕಿತ್ಸೆ ಸೌಲಭ್ಯವಿರುವ ಆಸ್ಪತ್ರೆಗೇ ದಾಖಲಿಸಬಹುದು. ಆಸ್ಪತ್ರೆ, ಆಂಬುಲೆನ್ಸ್, ಔಷಧ ಹುಡುಕಾಟಕ್ಕೆ ಸಂಬಂಧಿಸಿದ ಅನೇಕ ಸಮಸ್ಯೆಗಳನ್ನು ತ್ವರಿತವಾಗಿ ಬಗೆಹರಿಸಲು ಇದು ಪ್ರಯೋಜನಕಾರಿ. ಇದು ಕೊರೋನ ತಡೆಗಟ್ಟಲು ಪಾಲಿಕೆ ಇಟ್ಟಿರುವ ದಿಟ್ಟ ಹೆಜ್ಜೆ ಎಂದು ತಿಳಿಸಿದರು.

ವೈದ್ಯರ ತಂಡವು ಪ್ರತಿ ಮನೆಗೂ ಭೇಟಿ ನೀಡಿ ಆರೋಗ್ಯ ವಿಚಾರಿಸುವುದು, ಮನೆಯಲ್ಲಿ ಎಷ್ಟು ಮಂದಿ ವಾಸವಿದ್ದಾರೆ, ಎಷ್ಟು ಮಂದಿಗೆ ಲಸಿಕೆ ನೀಡಲಾಗಿದೆ, ಮೊದಲ ಲಸಿಕೆ ಹಾಗೂ ಎರಡನೇ ಲಸಿಕೆ ಪಡೆದಿರುವ ಬಗ್ಗೆ, ಕ್ಯಾನ್ಸರ್, ಬಿಪಿ, ಸಕ್ಕರೆ ಕಾಯಿಲೆ ಸೇರಿದಂತೆ ಇನ್ನಿತರೆ ರೋಗಗಳಿರುವ ಬಗ್ಗೆ ಮಾಹಿತಿ ಪಡೆಯಲಿದ್ದಾರೆ. ಕೋವಿಡ್ ಇರವ ಸಂದರ್ಭದಲ್ಲಿ ಕೋವಿಡ್ ಸೋಂಕು ಇರುವವರನ್ನ ಕಂಡುಹಿಡಿಯುವುದು ನಮ್ಮ ಮೊದಲ ಆದ್ಯತೆಯಾಗಿದ್ದು, ನಂತರ ನಗರದಲ್ಲಿ ಕೋವಿಡ್ ನಿಯಂತ್ರಿಸುವ ಸಂಬಂಧ ನಾಗರಿಕರಲ್ಲಿ ಹೆಚ್ಚು ಜಾಗೃತಿ ಮೂಡಿಸುಬೇಕು. ಅದಕ್ಕಾಗಿ ಎಲ್ಲಾ ಮನೆಗೂ ಕೋವಿಡ್ ಬಗ್ಗೆ ಅರಿವು ಮೂಡಿಸುವ ಕರಪತ್ರಗಳನ್ನು ನೀಡಲಾಗುತ್ತದೆ ಎಂದರು.

BBMP team of doctors on doorstep to control Covid-19

ಪ್ರತೀ ತಂಡವು ಪ್ರತಿನಿತ್ಯ ಕನಿಷ್ಠ 50 ಮನೆಗಳ ಸಮೀಕ್ಷೆ ನಡೆಸಲಿದೆ. ಅದಕ್ಕಾಗಿ ಪ್ರತೀ ವಾರ್ಡ್ ಗೆ 5 ವೈದ್ಯರ ತಂಡವಿರಲಿದ್ದು, ಆ ತಂಡದಲ್ಲಿ ಒಬ್ಬ ವೈದ್ಯಾಧಿಕಾರಿ(ಎಂ.ಬಿ.ಬಿ.ಎಸ್/ಬಿ.ಡಿ.ಎಸ್/ಆಯುಷ್) ಮತ್ತು ಅರೆವೈದ್ಯಕೀಯ ಸಿಬ್ಬಂದಿಯನ್ನೊಳಗೊಂಡ ತಂಡ ಇರಲಿದೆ. ಪ್ರತೀ ತಂಡದ ವೈದ್ಯಾಧಿಕಾರಿಗಳು ‘ಪಾಲಿಕೆ ವೈದ್ಯರು ನಿಮ್ಮ ಮನೆ ಬಾಗಿಲಿಗೆ, ನಿಮ್ಮ ಆರೋಗ್ಯವೇ ನಮ್ಮ ಧ್ಯೇಯ’ ಎಂಬ ಘೋಷಣೆಯನ್ನು ಮುದ್ರಿಸಿರುವ ಬಿಳಿ ಬಣ್ಣದ ಏಪ್ರಾನ್‌ನ್ನು ಧರಿಸಿರುತ್ತಾರೆ.

ಸಮೀಕ್ಷಾ ಕಾರ್ಯಕ್ಕಾಗಿ ಮನೆ-ಮನೆಗೆ ತಂಡಗಳು ಭೇಟಿ ನಿಡಲು ವಾಹನಗಳ ನಿಯೋಜನೆ ಮಾಡಲಾಗಿದೆ. ಮನೆ ಭೇಟಿಯ ಸಮಯದಲ್ಲಿ ಕೋವಿಡ್-19 ಸೋಂಕಿತರು ಪತ್ತೆಯಾದಲ್ಲಿ, ಸದರಿ ಸೋಂಕಿತರಿಗೆ, ಹೋಂ ಐಸೋಲೇಷನ್ ಕಿಟ್ ಅನ್ನು ನೀಡಲಾಗುತ್ತದೆ. ಜೊತೆಗೆ ಪ್ರತಿ ಮನೆ, ಕೊಳಗೇರಿ ಪ್ರದೇಶ ಬೇಟಿ ನೀಡಿದ ವೇಳೆ ಸಾಂತ್ವಾನ ಹಾಗೂ ಧೈರ್ಯ ತುಂಬುವ ಕೆಲಸ ಮಾಡಲಾಗುತ್ತದೆ ಎಂದು ಹೇಳಿದರು.

ಮನೆ-ಮನೆ ಭೇಟಿ ನೀಡುವ ಸಮೀಕ್ಷಾ ಕಾರ್ಯದಲ್ಲಿ ಪಡೆದ ಮಾಹಿತಿಯನ್ನು ಕಾಗದ ಬಳಕೆಮಾಡದೆ(ಪೇಪರ್ ಲೆಸ್) ಪ್ರತೀ ದಿನ ನಿಗಧಿತ ಬಿಬಿಎಂಪಿ ತಂತ್ರಾಂಶದಲ್ಲಿ ನಮೂದಿಸಲು ವೈದ್ಯರ ತಂಡಕ್ಕೆ ಸೂಚಿಸಲಾಗಿದೆ. ನಗರದಲ್ಲಿ ಕೋವಿಡ್ ಸೋಂಕನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ದೃಷ್ಟಿಯಿಂದ ಈ ಸಮೀಕ್ಷಾ ಕಾರ್ಯವನ್ನು ಹಮ್ಮಿಕೊಳ್ಳಲಾಗಿದೆ. ಇದರಿಂದ ಕೋವಿಡ್ ಸೋಂಕು ಕಂಡುಬಂದವೇಳೆ ಹಾಸಿಗೆ, ಆಂಬುಲೆನ್ಸ್, ಔಷಧ ಹುಡುಕಾಟ ಸೇರಿದಂತೆ ಇನ್ನಿತರೆ ಸಮಸ್ಯೆಗಳನ್ನು ತ್ವರಿತವಾಗಿ ಬಗೆಹರಿಸಿಕೊಳ್ಳಬಹುದಾಗಿದ್ದು, ಕೊರೋನ ತಡೆಗಟ್ಟಲು ದಿಟ್ಟ ಹೆಜ್ಜೆ ಇಡಲಾಗಿದೆ ಎಂದು ತಿಳಿಸಿದರು.

ಶಾಸಕ ರಿಜ್ವಾನ್ ಹರ್ಷದ್ ರವರು ಮಾತನಾಡಿ, ಬಿಬಿಎಂಪಿ ವ್ಯಾಪ್ತಿಯಲ್ಲಿ ಪಾಲಿಕೆ ವೈದ್ಯರು ನಿಮ್ಮ ಮನೆ ಬಾಗಿಲಿಗೆ ಎಂಬ ವಿನೂತನ ಕಾರ್ಯಕ್ರಮವನ್ನು ಆಯೋಜಿಸಿಸಿದ್ದು, ಈ ಮೂಲಕ ನೇರವಾಗಿ ಮನೆ ಮನೆ ಭೇಟಿ ಮಾಡಿ ಮಾತನಾಡುವುದರಿಂದ ಪಾಲಿಕೆಗೆ ಅಗತ್ಯ ಮಾಹಿತಿ ಲಬ್ಯವಾಗಲಿದೆ. ಇದರಿಂದ ಕೋವಿಡ್ ನಿಯಂತ್ರಿಸಲು ಸಹಕಾರಿಯಾಗಲಿದೆ. ಇದನ್ನು ಇಡೀ ನಗರದಲ್ಲಿ ಕಾರ್ಯಕ್ರಮ ಹಮ್ಮಿಕೊಂಡು ಯಶಸ್ವಿಯಾದರೆ ಒಂದು ಮೈಲಿಗಲ್ಲಾಗಲಿದೆ ಎಂದು ತಿಳಸಿದರು.

ಪಿ.ಹೆಚ್.ಎ.ಸಿ.ಟಿ (PHAST) ತಂತ್ರಾಂಶದ ಮೂಲಕ ಮಾಹಿತಿ ಸಂಗ್ರಹ:

Public Health Activities, Surveillance and Tracking (PHAST) ಎಂಬ ತಂತ್ರಾಂಶದಲ್ಲಿ ವೈದ್ಯರ ತಂಡವು ಪ್ರತಿ ಮನೆ-ಮನೆಗೆ ಭೇಟಿ ನೀಡಿ ಸಂಗ್ರಹಿಸಿ ಮಾಹಿತಿಯನ್ನು ನಮೂದಿಸಲಾಗುವುದು. ವೈದ್ಯರ ತಂಡವು ಮನೆಗೆ ಭೇಟಿ ನೀಡಿದ ವೇಳೆ ತಂತ್ರಾಂಶದಲ್ಲಿ ಕುಟುಂಬದ ಮೂಖ್ಯಸ್ಥರು ಹೆಸರು, ಮನೆಯ ವಿಳಾಸ, ಮನೆಯ ದೂರವಾಣಿ ಸಂಖ್ಯೆ, ಮನೆಯಲ್ಲಿ ವಾಸವಿರುವವರ ವಿವರ, ಮನೆಯಲ್ಲಿರುವವರ ವಯಸ್ಸು, ಕೋವಿಡ್ ಹಾಗೂ ಇನ್ನಿತರೆ ಕೋಮಾರ್ಬಿಟ್ ಬಗೆಗಿನ ಮಾಹಿತಿ, ಕೋವಿಡ್ ಲಸಿಕೆ ಪಡೆದಿರುವ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತದೆ.

ಈ ವೇಳೆ ಆಡಳಿತಗಾರರು ರಾಕೇಶ್ ಸಿಂಗ್, ಮುಖ್ಯ ಆಯುಕ್ತರು ಗೌರವ್ ಗುಪ್ತ ರವರು ವಿಶೇಷ ಆಯುಕ್ತರುಗಳಾದ ಡಿ.ರಂದೀಪ್, ಮನೋಜ್ ಜೈನ್, ತುಳಸಿ ಮದ್ದಿನೇನಿ, ಹರೀಶ್ ಕುಮಾರ್, ದಯಾನಂದ್, ರವೀಂದ್ರ ಹಾಗೂ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here