Home ರಾಜಕೀಯ ಬೆಳಗಾವಿ ಮರಾಠಿಗರದ್ದಲ್ಲ,ವೀರ ಕನ್ನಡಿಗರದ್ದು: ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರ ಸ್ವಾಮಿ

ಬೆಳಗಾವಿ ಮರಾಠಿಗರದ್ದಲ್ಲ,ವೀರ ಕನ್ನಡಿಗರದ್ದು: ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರ ಸ್ವಾಮಿ

52
0
Advertisement
bengaluru

ಬೆಂಗಳೂರು:

ಮರಾಠಿ ಮಾತನಾಡುವ ಪ್ರದೇಶಗಳನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಘೋ ಷಿಸಬೇಕು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ ಠಾಕ್ರೆ ಹೇಳಿದ್ದಾರೆ.ನಾವು ಬೆಳಗಾವಿಯನ್ನು ೨ನೇ ರಾಜ ಧಾನಿಯಾಗಿ ಮಾಡಿ,ವಿಧಾನಸೌಧ ನಿರ್ಮಿಸಿ, ಅಧಿವೇಶನ ನಡೆಸಿರುವುದನ್ನು ತಪ್ಪು ಎಂದೂ ಹೇಳಿದ್ದಾರೆ.ಠಾಕ್ರೆ ಅವರೇ ಬೆಳಗಾವಿ ಮರಾಠಿಗರದ್ದಲ್ಲ,ವೀರ ಕನ್ನಡಿಗರದ್ದು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರ ಸ್ವಾಮಿ ತಿರುಗೇಟು ನೀಡಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು,ಮಹಾರಾಷ್ಟ್ರದಲ್ಲಿ ಅಧಿಕಾರಕ್ಕೆ ಬರುವ ಯಾವುದೇ ಪಕ್ಷ ಬೆಳಗಾವಿ ವಿಚಾರದಲ್ಲಿ ಸಲ್ಲದ ಕಿತಾಪತಿ ಮಾಡುತ್ತವೆ ಎಂಬುದನ್ನು ಅರಿತೇ ನನ್ನ ಸರ್ಕಾರದ ಅವಧಿಯಲ್ಲಿ ಅಲ್ಲಿ ವಿಧಾ ನಸೌಧ ನಿರ್ಮಿಸಲಾಯಿತು.ಅಧಿವೇಶನವನ್ನೂ ನಡೆಸಲಾಯಿತು.ಬೆಳಗಾವಿಯ ಸುವರ್ಣಸೌಧ ಮಹಾರಾಷ್ಟ್ರ ದ ವಿಸ್ತರಣಾವಾದವನ್ನು ವಿರೋಧಿಸಿ ನಿಂತಿರುವ,ಕನ್ನಡಿಗರ ಸ್ವಾಭಿಮಾನಿ ಸೌಧ ಎಂದು ಅವರು ಸ್ಪಷ್ಟಪಡಿ ಸಿದ್ದಾರೆ.

ಮಹಾರಾಷ್ಟ್ರದ ಹಠದಿಂದಲೇ ರಚನೆಯಾದ ಮಹಾಜನ ಸಮಿತಿ ವರದಿಯಲ್ಲಿ ಬೆಳಗಾವಿ ಕರ್ನಾಟಕದ್ದೇ ಎಂ ದು ಸ್ಪಷ್ಟವಾಗಿ ಹೇಳಿದೆ.ಇದನ್ನು ಒಪ್ಪದ ಮಹಾರಾಷ್ಟ್ರ ನ್ಯಾಯಾಲಯದ ಮೆಟ್ಟಿಲೇರಿದೆ.ನ್ಯಾಯಾಲಯದಲ್ಲಿ ರುವ ಪ್ರಕರಣವೊಂದರ ಬಗ್ಗೆ ಇಲ್ಲ ಸಲ್ಲದ್ದನ್ನು ಮಾತಾಡುತ್ತಿರುವ ಉದ್ಧವ ಠಾಕ್ರೆ,ವಿಚಾರಣೆಯ ದಿಕ್ಕನ್ನೇ ತ ಪ್ಪಿಸುವ ಹುನ್ನಾರ ಮಾಡುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

bengaluru bengaluru

ಮಹಾರಾಷ್ಟ್ರ ಚೀನಾದಂತೆ ಮಾತನಾಡುವುದನ್ನು ಮೊದಲು ಬಿಡಬೇಕು.ಬೆಳಗಾವಿಯಲ್ಲಿ ಕನ್ನಡಿಗರು-ಮರಾಠಿ ಗರು ಅಣ್ಣ ತಮ್ಮಂದಿರಂತೆ ಬಾಳುತ್ತಿದ್ದಾರೆ.ಅವರ ಮನಸ್ಸುಗಳಲ್ಲಿ ವಿಷ ಬೀಜ ಬಿತ್ತುವ ಕೆಲಸವನ್ನು ಮಾಡಬಾ ರದು.ಗಡಿ ಎಂದ ಮೇಲೆ ಅದು ಎರಡು ಭಾಷೆ,ಎರಡೂ ರಾಜ್ಯಗಳ ಜನರ ಸಂಗಮ.ಅದರಲ್ಲಿ ನಮ್ಮವರೇ ಹೆಚ್ಚು, ನಾವೇ ಶಕ್ತಿವಂತರು ಎಂಬ ವಾದ ಸರಿಯಲ್ಲ ಎಂದು ಅವರು ಬುದ್ದಿವಾದ ಹೇಳಿದ್ದಾರೆ.

ಶಿವಸೇನೆಯೊಂದಿಗೆ ಅಧಿಕಾರ ಹಂಚಿಕೊಂಡಿರುವ ಕಾಂಗ್ರೆಸ್‌ ಪಕ್ಷ ಗಡಿ ವಿಚಾರದಲ್ಲಿ ಉದ್ಧವ ಠಾಕ್ರೆಗೆ ಬುದ್ಧಿ ಹೇಳಬೇಕು.ರಾಜ್ಯ ಕಾಂಗ್ರೆಸ್‌ ನಾಯಕರು ಬಾಯಿ ಉಪಚಾರಕ್ಕೆ ಠಾಕ್ರೆ ಮಾತುಗಳನ್ನು ಖಂಡಿಸಿದರೆ ಸಾಲದು. ಬದಲಿಗೆ ಬೆಳಗಾವಿ ನಮ್ಮದೇ ಎಂಬುದನ್ನು ಮನದಟ್ಟು ಮಾಡಬೇಕು.ಬೆಳಗಾವಿ ಬಗ್ಗೆ ಠಾಕ್ರೆಗೆ ಇರುವ ಭ್ರಮೆಗೆ ಚಿಕಿತ್ಸೆ ಕೊಡಿಸಬೇಕು ಎಂದು ಲೇವಡಿ ಮಾಡಿದ್ದಾರೆ.

ಇನ್ನೊಂದು ವಿಷಯ,ಬೆಳಗಾವಿಯನ್ನು ಮಹಾರಾಷ್ಟ್ರಕ್ಕೆ ಸೇರಿಸುತ್ತೇನೆ ಎಂದಾಗ ಠಾಕ್ರೆಗೆ ಒಂದು ಸಲಹೆ ನೀಡಿ ದ್ದೆ.ಕರ್ನಾಟಕ-ಮಹಾರಾಷ್ಟ್ರದ ಇತಿಹಾಸ ಓದಬೇಕೆಂಬುದು ಆ ಸಲಹೆ ಆಗಿತ್ತು.ಚರಿತ್ರೆ ಓದಿದ್ದರೆ ಮಹಾರಾಷ್ಟ್ರ ವು ಕನ್ನಡರಸರಿಂದ ಆಳಿಸಿಕೊಂಡ ನಾಡು ಎಂಬುದು ಅವರಿಗೂ ತಿಳಿಯುತ್ತಿತ್ತು. ಅವರು ಓದಿದಂತೆ ಕಾಣುತ್ತಿ ಲ್ಲ.ಚರಿತ್ರೆ ಓದಿ ಎಂದು ಸಲಹೆ ನೀಡಿದ್ದಾರೆ.


bengaluru

LEAVE A REPLY

Please enter your comment!
Please enter your name here