Home Uncategorized Bengaluru ಪಾರಿವಾಳ ಹಿಡಿಯಲು ಹೋದ ಮಕ್ಕಳಿಗೆ ತಗುಲಿದ ಹೈಟೆನ್ಷನ್ ವಿದ್ಯುತ್ ತಂತಿ: ಬಾಲಕರ ಸ್ಥಿತಿ ಗಂಭೀರ

Bengaluru ಪಾರಿವಾಳ ಹಿಡಿಯಲು ಹೋದ ಮಕ್ಕಳಿಗೆ ತಗುಲಿದ ಹೈಟೆನ್ಷನ್ ವಿದ್ಯುತ್ ತಂತಿ: ಬಾಲಕರ ಸ್ಥಿತಿ ಗಂಭೀರ

26
0

ಬೆಂಗಳೂರು: ಪಾರಿವಾಳ ಹಿಡಿಯುವ ವೇಳೆ ಹೈಟೆನ್ಷನ್ ವಿದ್ಯುತ್​​ ತಂತಿ ತಗುಲಿ (electric Shock) ಇಬ್ಬರು ಬಾಲಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು(ಡಿಸೆಂಬರ್ 01) ಸಂಜೆ ಬೆಂಗಳೂರಿನ ನಂದಿನಿ ಲೇಔಟ್​ನ ವಿಜಯಾನಂದನಗರದಲ್ಲಿ ನಡೆದಿದೆ. ತೀವ್ರವಾಗಿ ಗಾಯಗೊಂಡಿರುವ ಚಂದ್ರು(10), ಸುಪ್ರೀತ್(12) ಎನ್ನುವ ಬಾಲಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಚಂದ್ರು ಹಾಗೂ ಸುಪ್ರೀತ್ ಎನ್ನುವ ಬಾಲಕರು ಕಬ್ಬಿಣದ ರಾಡ್​ನಿಂದ ಹೈಟೆನ್ಷನ್​ ವೈರ್​ ಮೇಲೆ ಕುಳಿತಿದ್ದ ಪಾರಿವಾಳ ಹಿಡಿಯಲು ಯತ್ನಿಸಿದ್ದಾರೆ. ಈ ವೇಳೆ ವಿದ್ಯುತ್ ಪ್ರವಹಿಸಿದ್ದು, ಬಾಲಕರ ಸ್ಥಿತಿ ಗಂಭೀರವಾಗಿದೆ.

ವಿದ್ಯುತ್​​ ಹೈಟೆನ್ಶನ್ ವೈರ್ ತಾಗಿದ್ದರಿಂದ ಸುಪ್ರೀತ್ ಹಾಗೂ ಚಂದನ್​ ಮೈಮೇಲೆ ಸುಟ್ಟ ಗಾಯಗಳಾಗಿವೆ. ಸದ್ಯ ಮಕ್ಕಳಿಬ್ಬರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಜೀವನ್ಮರಣದ ಹೋರಾಟ ನಡೆಸುತ್ತಿದ್ದಾರೆ.

ವಿಷಯ ತಿಳಿದು ಘಟನಾ ಸ್ಥಳಕ್ಕೆ ಸಚಿವ ಗೋಪಾಲಯ್ಯ ಭೇಟಿ ನೀಡಿದ್ದು, ಸ್ಥಳೀಯರಿಂದ ಮಾಹಿತಿ ಪಡೆದುಕೊಂಡರು.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

LEAVE A REPLY

Please enter your comment!
Please enter your name here