Home Uncategorized Bengaluru; ಅತ್ತಿಬೆಲೆ ಪಟಾಕಿ ದುರಂತ ಕೇಸ್, ಅಧಿಕಾರಿಗಳ ಜೊತೆ ಇಂದು ಸಿಎಂ ಮಹತ್ವ ಸಭೆ

Bengaluru; ಅತ್ತಿಬೆಲೆ ಪಟಾಕಿ ದುರಂತ ಕೇಸ್, ಅಧಿಕಾರಿಗಳ ಜೊತೆ ಇಂದು ಸಿಎಂ ಮಹತ್ವ ಸಭೆ

18
0

ಬೆಂಗಳೂರು;- ಅತ್ತಿಬೆಲೆ ಪಟಾಕಿ ಗೋದಾಮು ದುರಂತದಿಂದ ಸರ್ಕಾರ ಎಚ್ಚೆತ್ತುಕೊಂಡಿದೆ. ಇಂದು ಅಧಿಕಾರಿಗಳ ಜೊತೆ ಸಿಎಂ ಮಹತ್ವ ಸಭೆ ನಡೆಸಲಿದ್ದಾರೆ.

ಇಂದು ಮಧ್ಯಾಹ್ನ 1 ಗಂಟೆಗೆ ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ಸಂಬಂಧಪಟ್ಟ ಅಧಿಕಾರಿಗಳ ಜೊತೆ ಸಭೆ ನಿಗದಿಯಾಗಿದೆ. ಅಗತ್ಯ ಮಾಹಿತಿಗಳೊಂದಿಗೆ ಸಭೆಗೆ ಹಾಜರಾಗುವಂತೆ ಸೂಚಿಸಿದ್ದು, ಪಟಾಕಿ ದುರಂತದ ಬಗ್ಗೆ ಕೈಗೊಳ್ಳಬೇಕಾದ ಅಗತ್ಯ ಕ್ರಮಗಳ ಬಗ್ಗೆ ಚರ್ಚಿಸಲಿದ್ದಾರೆ ಎನ್ನಲಾಗಿದೆ.

ಇತ್ತ ತಡವಾಗಿಯಾದ್ರೂ ಎಚ್ಚೆತ್ತುಕೊಂಡಿರೋ ಅತ್ತಿಬೆಲೆ ಪುರಸಭೆ ಅಧಿಕಾರಿಗಳು ಪಟಾಕಿ ಅಂಗಡಿಗಳ ಮೇಲೆ ದಾಳಿ ನಡೆಸಿದ್ರು. ಶಾಪ್‌ನ ಲೈಸನ್ಸ್‌, ಪಟಾಕಿಗಳ ಗುಣಮಟ್ಟ ಪರಿಶೀಲನೆ ನಡೆಸಿದ್ರು. ಗ್ರೀನ್‌ ಪಟಾಕಿ ಇಟ್ಟಿದ್ದಾರಾ? ಮತ್ಯಾವ ಪಟಾಕಿ ಮಾರಾಟ ಮಾಡುತ್ತಿದ್ದಾರೆ ಎಂದು ಪರಿಶೀಲಿಸಿದ್ದಾರೆ.

ಇನ್ನೂ ಸಿಐಡಿ ಐಜಿಪಿ ಮಧುಕರ್​ ಪವಾರ್ ನೇತೃತ್ವದ ತಂಡ ನಿನ್ನೆ ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿತ್ತು. ಮತ್ತೊಂದೆಡೆ ಐದಾರು ಜೆಸಿಬಿಗಳನ್ನ ಬಳಸಿಕೊಂಡು ಗೋದಾಮನ್ನ ನೆಲಸಮಗೊಳಿಸಲಾಗಿದೆ. ಶಾರ್ಟ್‌ ಸರ್ಕ್ಯೂಟ್‌ನಿಂದ ಈ ಅವಘಡ ಆಯ್ತಾ ಅನ್ನೋ ಬಗ್ಗೆಯೂ ತನಿಖೆಯಾಗುತ್ತಿದ್ದು, ಈ ಬಗ್ಗೆ ವಿದ್ಯುತ್ ಪರಿವೀಕ್ಷಣಾ ಅಧಿಕಾರಿಗಳ ತಂಡ ಕೂಡಾ ಭೇಟಿ ನೀಡಿ ಪರಿಶೀಲನೆ ನಡೆಸಿದೆ.

The post Bengaluru; ಅತ್ತಿಬೆಲೆ ಪಟಾಕಿ ದುರಂತ ಕೇಸ್, ಅಧಿಕಾರಿಗಳ ಜೊತೆ ಇಂದು ಸಿಎಂ ಮಹತ್ವ ಸಭೆ appeared first on Ain Live News.

LEAVE A REPLY

Please enter your comment!
Please enter your name here