Home Uncategorized Bengaluru; ರಾಜ್ಯವು ಸಂಪೂರ್ಣ ದಿವಾಳಿಯತ್ತ ಸಾಗುತ್ತಿದೆ – ಸರ್ಕಾರದ ವಿರುದ್ಧ ಎಎಪಿ ಕಿಡಿ

Bengaluru; ರಾಜ್ಯವು ಸಂಪೂರ್ಣ ದಿವಾಳಿಯತ್ತ ಸಾಗುತ್ತಿದೆ – ಸರ್ಕಾರದ ವಿರುದ್ಧ ಎಎಪಿ ಕಿಡಿ

34
0

ಬೆಂಗಳೂರು;– ಆಮ್ ಆದ್ಮಿ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಬಿ.ಟಿ .ನಾಗಣ್ಣ ರಾಜ್ಯ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಾಂಗ್ರೆಸ್ ರಾಜ್ಯದ ರೈತರನ್ನು ಸಂಕಷ್ಟಕ್ಕೆ ತಳ್ಳಿದೆ. ರೈತರ ಪಂಪ್‌ಸೆಟ್‌ಗಳಿಗೆ ಈ ಮೊದಲು 7 ಗಂಟೆ ವಿದ್ಯುತ್ ಪೂರೈಕೆ ಮಾಡಲಾಗುತ್ತಿತ್ತು, ಈಗ 2 ಗಂಟೆಗಳ ಕಾಲ ಕೂಡ ಸರಿಯಾಗಿ ವಿದ್ಯುತ್ ಪೂರೈಕೆ ಮಾಡುತ್ತಿಲ್ಲ ಎಂದರು.

ಬೆಸ್ಕಾಂ ಸೇರಿದಂತೆ ರಾಜ್ಯದ ಎಲ್ಲಾ ಐದು ವಿದ್ಯುತ್ ಶಕ್ತಿ ಪೂರೈಕೆ ಕಂಪನಿಗಳು ಈಗಾಗಲೇ 63000 ಕೋಟಿ ಸಾಲದ ಸುಳಿಯಲ್ಲಿ ಸಿಲುಕಿವೆ ಈ ಸಮಯದಲ್ಲಿ ಮುಖ್ಯಮಂತ್ರಿಗಳು 85,000 ಕೋಟಿ ಸಾಲವನ್ನು ಪಡೆಯಲು ಈಗಾಗಲೇ ಆರ್ಥಿಕ ಇಲಾಖೆಗೆ ಸೂಚಿಸಿರುವುದನ್ನು ಗಮನಿಸಿದಾಗ ರಾಜ್ಯವು ಸಂಪೂರ್ಣ ದಿವಾಳಿಯತ್ತ ಸಾಗುತ್ತಿದೆ ಎಂಬುದು ಸ್ಪಷ್ಟವಾಗುತ್ತಿದೆ ಎಂದರು.

ದೆಹಲಿಯಲ್ಲಿ ನಾವು ಭರವಸೆ ನೀಡಿದಂತೆ 200 ಯೂನಿಟ್ ವಿದ್ಯುತ್ ಉಚಿತವಾಗಿ ಕೊಡಲಾಗುತ್ತಿದೆ. ದೆಹಲಿಯಲ್ಲಿ ವಿದ್ಯುತ್ ಪೂರೈಕೆದಾರರು ಒಂದು ಗಂಟೆ ವಿದ್ಯುತ್ ಕಡಿತ ಮಾಡಿದರೆ ಒಂದು ಗಂಟೆಗೆ 50 ರೂಪಾಯಿ ದಂಡ ಕಟ್ಟಿಕೊಡಬೇಕಾಗುತ್ತದೆ, 2 ಗಂಟೆಗಿಂತ ಹೆಚ್ಚು ಸಮಯ ವಿದ್ಯುತ್ ಕಡಿತ ಮಾಡಿದರೆ ಗಂಟೆಗೆ 100 ರೂಪಾಯಿಯಂತೆ ದಂಡ ಕಟ್ಟಿಕೊಡಬೇಕು, ಅಂತಹ ಕಾನೂನು ರೂಪಿಸಲಾಗಿದೆ. ಅಂತಹ ಕಾನೂನು ಇಲ್ಲಿ ತರಲಿ ಎಂದು ಒತ್ತಾಯಿಸಿದರು.

The post Bengaluru; ರಾಜ್ಯವು ಸಂಪೂರ್ಣ ದಿವಾಳಿಯತ್ತ ಸಾಗುತ್ತಿದೆ – ಸರ್ಕಾರದ ವಿರುದ್ಧ ಎಎಪಿ ಕಿಡಿ appeared first on Ain Live News.

LEAVE A REPLY

Please enter your comment!
Please enter your name here