Home ಅಪರಾಧ ಬೆಂಗಳೂರು | ಕ್ಷುಲ್ಲಕ ವಿಚಾರಕ್ಕೆ ಜಗಳ : ಆಟೋ ಚಾಲಕನ ಕೊಲೆ

ಬೆಂಗಳೂರು | ಕ್ಷುಲ್ಲಕ ವಿಚಾರಕ್ಕೆ ಜಗಳ : ಆಟೋ ಚಾಲಕನ ಕೊಲೆ

26
0
Sanjaynagar Police Station

ಬೆಂಗಳೂರು: ಕ್ಷುಲ್ಲಕ ವಿಚಾರಕ್ಕೆ ಜಗಳವಾಡಿ ರೌಡಿಶೀಟರ್ ವೊಬ್ಬ ಆಟೋ ಚಾಲಕನಿಗೆ ಡ್ರಾಗರ್ ನಿಂದ ಇರಿದು ಕೊಲೆಗೈದಿರುವ ಘಟನೆ ಇಲ್ಲಿನ ಸಂಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾಗಿದೆ.

ನಾಗಶೆಟ್ಟಿಹಳ್ಳಿ ನಿವಾಸಿ ಮೂರ್ತಿ(42) ಕೊಲೆಯಾದ ಆಟೋ ಚಾಲಕ ಎಂದು ಗುರುತಿಸಲಾಗಿದೆ.

ಮೇ2ರ ಮಧ್ಯರಾತ್ರಿ 11.50ರ ಸುಮಾರಿಗೆ ನಾಗಶೆಟ್ಟಿಹಳ್ಳಿ ಬಸ್ ನಿಲ್ದಾಣದ ಬಳಿ ಮೂರ್ತಿ ಜೊತೆ ಸಚಿನ್ ಎಂಬಾತ ಕ್ಷುಲ್ಲಕ ವಿಚಾರಕ್ಕೆ ಜಗಳವಾಡಿದ್ದಾನೆ. ಆ ವೇಳೆ ಮಾತಿಗೆ ಮಾತು ಬೆಳೆದಿದೆ. ಆ ಸಂದರ್ಭದಲ್ಲಿ ಸಚಿನ್ ಫೋನ್ ಮಾಡಿ ರೌಡಿಶೀಟರ್ ಶರಣಪ್ಪನನ್ನು ಸ್ಥಳಕ್ಕೆ ಕರೆಸಿಕೊಂಡಿದ್ದಾನೆ. ಈ ಹಿಂದೆ ಶರಣಪ್ಪನಿಗೂ ಹಾಗೂ ಮೂರ್ತಿ ನಡುವೆ ಜಗಳವಾಗಿತ್ತು. ಇವರೆಲ್ಲರೂ ಒಂದೇ ಏರಿಯಾದವರು. ಶರಣಪ್ಪಗೆ ಮೂರ್ತಿ ವಿರುದ್ಧ ಹಳೆ ದ್ವೇಷವಿತ್ತು. ಇದೇ ಸಮಯಕ್ಕಾಗಿ ಕಾಯುತ್ತಿದ್ದ ರೌಡಿಶೀಟರ್ ಶರಣಪ್ಪ ಏಕಾಏಕಿ ಮೂರ್ತಿ ಜೊತೆ ಜಗಳವಾಡಿ ಡ್ರ್ಯಾಗರ್ ನಿಂದ ಇರಿದು ಸ್ಥಳದಿಂದ ಸಚಿನ್ ಜೊತೆ ಪರಾರಿಯಾಗಿದ್ದಾನೆ ಎನ್ನಲಾಗಿದೆ.

ಇರಿತದಿಂದಾಗಿ ತೀವ್ರ ರಕ್ತಸ್ರಾವದಿಂದ ಕುಸಿದು ಬಿದ್ದ ಮೂರ್ತಿಯನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ದರಾದರೂ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಸುದ್ದಿ ತಿಳಿದು ಸಂಜಯನಗರ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಳ ಪತ್ತೆಗಾಗಿ ಶೋಧ ಕೈಗೊಂಡಿರುವುದಾಗಿ ಮಾಹಿತಿ ನೀಡಿದ್ದಾರೆ.

LEAVE A REPLY

Please enter your comment!
Please enter your name here