ಬೆಂಗಳೂರು;- ಬಿಸಿಯೂಟ ನೌಕರರಿಂದ ಇಂದು ಬೆಂಗಳೂರು ಚಲೋ ನಡೆಯಲಿದೆ. ಫ್ರೀಡಮ್ ಪಾರ್ಕ್ನಲ್ಲಿ ಅನಿರ್ಧಿಷ್ಟ ಧರಣಿ ಆರಂಭಿಸಲಾಗುತ್ತದೆ ಎಂದು ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಫೆಡರೇಷನ್ ಜಿಲ್ಲಾ ಅಧ್ಯಕ್ಷ ಪ್ರಭುದೇವ್ ಯಳಸಂಗಿ ಹೇಳಿದ್ದಾರೆ.
ಅನಿರ್ಧಿಷ್ಟ ಧರಣಿಯಲ್ಲಿ ಜಿಲ್ಲೆಯಿಂದ ಸುಮಾರು 150 ಹಾಗೂ ರಾಜ್ಯದ ವಿವಿಧ ಜಿಲ್ಲೆಗಳಿಂದ ಸುಮಾರು ಹತ್ತು ಸಾವಿರಕ್ಕೂ ಹೆಚ್ಚು ಬಿಸಿಯೂಟ ತಯಾರಕರು ಪಾಲ್ಗೊಳ್ಳುವರು ಎಂದರು.
ರಾಜ್ಯದಲ್ಲಿ ಸುಮಾರು 18000ಕ್ಕಿಂತ ಹೆಚ್ಚು ಜನ ಬಿಸಿಯೂಟ ನೌಕರರು ಕೆಲಸ ನಿರ್ವಹಿಸುತ್ತಿದ್ದಾರೆ. ಆದಾಗ್ಯೂ, ಅವರಿಗೆ ಕನಿಷ್ಠ ವೇತನವನ್ನು ಇಲ್ಲಿಯವರೆಗಿನ ಸರ್ಕಾರಗಳು ನೀಡಿಲ್ಲ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ವಿರೋಧ ಪಕ್ಷವಾಗಿದ್ದ ಕಾಂಗ್ರೆಸ್ ಪಕ್ಷವು ಕನಿಷ್ಠ ವೇತನದ ಕುರಿತು ಆರನೇ ಗ್ಯಾರಂಟಿ ಘೋಷಿಸಿದ್ದರು.
The post Bengaluru Chalo; ಬಿಸಿಯೂಟ ನೌಕರರಿಂದ ಇಂದು ಬೆಂಗಳೂರು ಚಲೋ appeared first on Ain Live News.