
ಬೆಂಗಳೂರು:
ಕಿಯೋನಿಕ್ಸ್ ಸಂಸ್ಥೆಯು ಎಂಟು ತಿಂಗಳಿಂದ ಗುತ್ತಿಗೆದಾರರ ಹಣವನ್ನು ಬಾಕಿ ಇರಿಸಿದೆ. ಇದರಿಂದಾಗಿ ಕಿಯೋನಿಕ್ಸ್ ನಿರ್ದೇಶಕರ ವಿರುದ್ಧ ಸಿಡಿದೆದ್ದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿನ ಗುತ್ತಿಗೆದಾರರು ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಬಾಕಿ ಹಣ ಬಿಡುಗಡೆ ಮಾಡಬೇಕು ಮತ್ತು ಟೆಂಡರ್ ಮುಂದುವರಿಸುವಂತೆ ಆಗ್ರಹಿಸಿದರು.
ಬಾಕಿ ಉಳಿಸಿಕೊಂಡಿರುವ 150 ಕೋಟಿ ಹಣವನ್ನು ಕೂಡಲೇ ಬಿಡಬೇಕು ಎಂದು ಗುತ್ತಿಗೆದಾರರು ಒತ್ತಾಯಿಸಿದ್ದಾರೆ. ಬಾಕಿ ಬಿಲ್ ಪಾವತಿಗೆ ಆಗ್ರಹಿಸಿ ಗುತ್ತಿಗೆದಾರರು ಶಾಂತಿನಗರದ ಟಿಟಿಎಂಸಿ 2ನೇ ಮಹಡಿಯಲ್ಲಿರುವ ಕಿಯೋನಿಕ್ಸ್ ವ್ಯವಸ್ಥಾಪಕ ನಿರ್ದೇಶಕ ಸಂಗಪ್ಪ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು. ಈ ವೇಳೆ ಪ್ರತಿಭಟನಾ ನಿರತ ಗುತ್ತಿಗೆದಾರರೊಬ್ಬರು ಸೈಯದ್ ವಿಷ ಸೇವಿಸಲು ಯತ್ನಿಸಿದರು.
ಗುತ್ತಿಗೆದಾರರ ಬಾಕಿ ಬಿಲ್ ಪಾವತಿ ವಿಳಂಬ ಹಿನ್ನೆಲೆ ಸಚಿವ ಪ್ರಿಯಾಂಕಾ ಖರ್ಗೆ ಅವರು ಅಧಿಕಾರಿಗಳ ಜೊತೆ ವಿಕಾಸಸೌಧದಲ್ಲಿ ಸಭೆ ನಡೆಸುತ್ತಿದ್ದಾರೆ. ಸಭೆಯಲ್ಲಿ ಕಿಯೋನಿಕ್ಸ್ ಎಂಡಿ ಸಂಗಪ್ಪ ಭಾಗಿಯಾಗಿದ್ದಾರೆ. ಪ್ರತಿಭಟನಾಕಾರರಿಗೆ ಸಭೆ ಮುಗಿಸಿ ಬರುವುದಾಗಿ ಭರವಸೆ ನೀಡಿದ್ದಾರೆ. ಆದರೆ, ಗುತ್ತಿಗೆದಾರರು ಗೋ ಬ್ಯಾಕ್ ಸಂಗಪ್ಪ, ಗೋ ಬ್ಯಾಕ್ ಸಂಗಪ್ಪ ಎಂದು ಧಿಕ್ಕಾರ ಕೂಗಿ ಪ್ರತಿಭಟನೆ ನಡೆಸುತ್ತಿದ್ದಾರೆ.
Also Read: Bengaluru | KEONICS Contractors shouts “Go back Sangappa, Go back Sangappa”
ಎಂಡಿ ಸಂಗಪ್ಪ ವಿರುದ್ಧ ಕಮೀಷನ್ ಆರೋಪವೂ ಕೇಳಿಬಂದಿದೆ. ಸುಮಾರು 150 ಕೋಟಿ ಬಾಕಿ ಬಿಲ್ ಹಣ ಬಾಕಿ ಉಳಿಸಿಕೊಂಡಿರುವುದರಿಂದ 450ಕ್ಕೂ ಹೆಚ್ಚು ಗುತ್ತಿಗೆದಾರರು ಸಂಕಷ್ಟದಲ್ಲಿದ್ದಾರೆ. ಬಾಕಿ ಹಣ ಬಿಡುಗಡೆ ಮಾಡಲು ಎಂಡಿ ಸಂಗಪ್ಪ ಕಮಿಷನ್ ಕೇಳುತ್ತಿದ್ದಾರೆ ಎಂದು ಆರೋಪಿಸಲಾಗಿದೆ.
ಅಕ್ಟೋಬರ್ 21 ರೊಳಗೆ ಬಾಕಿ ಬಿಲ್ ಬಿಡುಗಡೆ ಮಾಡುವುದಾಗಿ ಹೇಳಿದ್ದ ಎಂಡಿ ಸಂಗಪ್ಪ. ಆದರೆ ನವೆಂಬರ್ ತಿಂಗಳು ಬಂದ್ರು ಬಾಕಿ ಬಿಲ್ ಬಿಡುಗಡೆ ಮಾಡಿಲ್ಲ. ಸೆಪ್ಟಂಬರ್ 15 ರಂದು ಹಣ ಬಿಡುಗಡೆ ಮಾಡಲಾಗಿದೆ. ಬಿಲ್ ರೆಡಿ ಮಾಡಿ ಚೆಕ್ ಗೆ ಸಹಿ ಹಾಕಿರುವ ಅಧಿಕಾರಿಗಳು. ದಾಖಲೆಗಳಲ್ಲಿ ಹಣ ಪಾವತಿ ಅಂತ ತೋರಿಸಿ ನಂತರ ಚೆಕ್ ಕ್ಯಾನ್ಸಲ್ ಮಾಡಿರುವ ಎಂಡಿ ಸಂಗಪ್ಪ, ಕಮಿಷನ್ ಹಣಕ್ಕೆ ವಿಳಂಬ ಮಾಡುತ್ತಿದ್ದಾರೆಂದು ಆರೋಪಿಸಿರುವ ಗುತ್ತಿಗೆದಾರರು.