ಬೆಂಗಳೂರು:
ಕೋವಿಡ್-19 ವಿರುದ್ಧದ ಲಸಿಕೆ ಅಭಿಯಾನದಲ್ಲಿ 2,09,256 ಡೋಸ್ಗಳನ್ನು ನೀಡುವ ಮೂಲಕ ಬೆಂಗಳೂರು ಅರ್ಬನ್ ದೇಶದ ಜಿಲ್ಲೆಗಳಲ್ಲಿ ಪ್ರಥಮ ಸ್ಥಾನದಲ್ಲಿದ್ದರೆ, ಕರ್ನಾಟಕವು 10.36 ಲಕ್ಷ ಡೋಸ್ಗಳನ್ನು ನೀಡುವ ಮೂಲಕ ರಾಜ್ಯಗಳಲ್ಲಿ ಎರಡನೇ ಸ್ಥಾನದಲ್ಲಿದೆ ಎಂದು ಆರೋಗ್ಯ ಸಚಿವ ಕೆ ಸುಧಾಕರ್ ಹೇಳಿದರು.
ಈ ಕುರಿತು ಟ್ವಿಟರ್ ನಲ್ಲಿ ಮಾಹಿತಿ ನೀಡಿರುವ ಸಚಿವರು, ಇಂದು ಒಂದೇ ದಿನದಲ್ಲಿ 78 ಲಕ್ಷಕ್ಕೂ ಅಧಿಕ ಮಂದಿಗೆ ಕೋವಿಡ್ ಲಸಿಕೆ ನೀಡುವ ಮೂಲಕ ಭಾರತ ಮಹತ್ವದ ಮೈಲಿಗಲ್ಲು ಸಾಧಿಸಿದೆ. ಕರ್ನಾಟಕದಲ್ಲಿ 10 ಲಕ್ಷಕ್ಕೂ ಅಧಿಕ ಮಂದಿಗೆ ಲಸಿಕೆ ನೀಡಲಾಗಿದ್ದು, ದೇಶದಲ್ಲಿ ನಮ್ಮ ರಾಜ್ಯ ಎರಡನೇ ಸ್ಥಾನದಲ್ಲಿದೆ ಎಂದಿದ್ದಾರೆ.
📢 Karnataka stood second in the entire country in the nationwide Vaccine Maha Abhiyan today. The State administered 10.36 lakh doses in a single day today (till 7 pm). Total doses administered in the State to date are 1.96 Crore.@narendramodi @drharshvardhan @BSYBJP pic.twitter.com/opbtnQ16Ru
— Dr Sudhakar K (@mla_sudhakar) June 21, 2021
ರಾಜ್ಯದಲ್ಲಿ ಈವರೆಗೂ ಒಟ್ಟಾರೇ,1.96 ಕೋಟಿ ಲಸಿಕೆ ನೀಡಲಾಗಿದೆ ಎಂದು ಡಾ. ಸುಧಾಕರ್ ಹೇಳಿದ್ದಾರೆ.