ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಬೀದರ್ ನ ನೆಹರೂ ಕ್ರೀಡಾಂಗಣದಲ್ಲಿ ಬುಧವಾರ ನಡೆದ ₹ 2025 ಕೋಟಿ ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಬೀದರ್- ಬೆಂಗಳೂರು ನಾಗರೀಕ ವಿಮಾನಯಾನ ಸೇವೆ ಪುನರಾರಂಭಕ್ಕೆ ಚಾಲನೆ ನೀಡಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್, ಸಚಿವರಾದ ಈಶ್ವರ್ ಖಂಡ್ರೆ, ಎಂ.ಸಿ. ಸುಧಾಕರ್, ಸಂಸದ ಸಾಗರ್ ಖಂಡ್ರೆ ಮತ್ತಿತರರು ಭಾಗವಹಿಸಿದ್ದರು.