ವಾಹಿನಿಗಳ ಕಾರ್ಯಕ್ರಮಗಳಲ್ಲಿ ಭಾಗಿ ಆಗುವುದು ತಪ್ಪೇನೂ ಇಲ್ಲ. ನಾನು ಬಿಗ್ ಬಾಸ್ ಮನೆಗೆ ಹೋಗಿದ್ದು ಕೇವಲ ಎರಡ್ಮೂರು ತಾಸು ಮಾತ್ರ. ಅಲ್ಲಿನ ಸ್ಪರ್ಧಿಗಳಿಗೆ ಉತ್ತೇಜಿಸಲು ಹೋಗಿದ್ದೆ. ಸ್ಫೂರ್ತಿದಾಯಕ ಮಾತುಗಳನ್ನು ಆಡಿದ್ದೇನೆ. ಬಿಗ್ ಬಾಸ್ ಮನೆಯಲ್ಲಿ ಇರುವವರಿಗೆ ಧೈರ್ಯ ತುಂಬಿದ್ದೇನೆ. ಇದನ್ನು ಯಾಕೆ ವಿವಾದ ಮಾಡಲಾಗುತ್ತಿದೆ ಗೊತ್ತಿಲ್ಲ. ನೂರು ದಿನ ಹೋಗಿದ್ದರೆ ಮಾತನಾಡಬಹುದಿತ್ತು. ಹೋಗಿದ್ದೆ ಮೂರು ತಾಸು ಎಂದು ಪ್ರದೀಪ್ ಈಶ್ವರ್ ಬಿಗ್ ಬಾಸ್ ಗೆ ಹೋಗಿದ್ದನ್ನು ಸಮರ್ಥಿಸಿಕೊಂಡರು.
ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಪ್ರದೀಪ್ ಈಶ್ವರ್, ನಾನು ಡಾ.ರಾಜ್ ಕುಮಾರ್ ಅವರ ಅಭಿಮಾನಿ. ಅವರ ‘ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು’ ಹಾಡಿಗೆ ನೃತ್ಯ ಮಾಡಿದ್ದೇನೆ. ಡಾನ್ಸ್ ಮಾಡಿದ್ದರಲ್ಲಿ ತಪ್ಪಿಲ್ಲ ಅಂತ ನನಗೆ ಅನಿಸುತ್ತದೆ. ನನ್ನ ಬಗ್ಗೆ ನೆಗೆಟಿವ್ ಮಾತನಾಡುವವರ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ ಎಂದಿದ್ದಾರೆ
ನಿನ್ನೆಯಷ್ಟೇ ಬಿಗ್ ಬಾಸ್ ಮನೆ ಪ್ರವೇಶ ಮಾಡಿದ್ದ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ದೊಡ್ಮನೆಯಿಂದ ಹೊರ ಬಂದಿದ್ದಾರೆ. ಮನೆಗೆ ಹೋದ ಮೊದಲ ದಿನವೇ ಸಾಕಷ್ಟು ಸುದ್ದಿ ಮಾಡಿದ್ದರು ಪ್ರದೀಪ್ ಈಶ್ವರ್. ಹಲವು ದಿನಗಳ ಕಾಲ ಸ್ಪರ್ಧಿಯಾಗಿಯೇ ಅವರು ಮನೆಯಲ್ಲಿ ಉಳಿಯಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಅವರು ಹೋದದ್ದು ಅತಿಥಿಯಾಗಿ ಎನ್ನುವುದು ಈಗ ಗೊತ್ತಾಗಿದೆ.
The post Bigg Boss Kannada: ಖಾಸಗಿ ವಾಹಿನಿಗಳ ಕಾರ್ಯಕ್ರಮಗಳಲ್ಲಿ ಭಾಗಿ ಆಗುವುದು ತಪ್ಪೇನೂ ಇಲ್ಲ: ಪ್ರದೀಪ್ ಈಶ್ವರ್ ಸಮರ್ಥನೆ! appeared first on Ain Live News.