ಬಾಗಲಕೋಟೆ: ಇಂದು ಜಮಖಂಡಿ ನಗರದಲ್ಲಿ ಜಮಖಂಡಿ ಮತಕ್ಷೇತ್ರದ ಬಿಜೆಪಿ ಕಾರ್ಯಕರ್ತರ ಸಮಾವೇಶ ನಡೆಯಲಿದೆ. ಜಮಖಂಡಿ ಬಿಜೆಪಿ ಶಾಸಕ ಜಗದೀಶ್ ಗುಡಗುಂಟಿ ಅವರ ನಿವಾಸದ ಸಭಾಂಗಣದಲ್ಲಿ ಸಮಾವೇಶ ನಡೆಯಲಿದ್ದು, ಮಾಜಿ ಸಿಎಮ್ ಬಸವರಾಜ ಬೊಮ್ಮಾಯಿ, ಮಾಜಿ ಡಿಸಿಎಂ ಗೋವಿಂದ ಎಂ ಕಾರಜೋಳ, ಮಾಜಿ ಸಚಿವ ಸುರೇಶ್ ಕುಮಾರ, ಬಾಗಲಕೋಟೆ ಸಂಸದ ಪಿಸಿ ಗದ್ದಿಗೌಡರ ,
MP Renukacharya: ಮೋಸ ಮಾಡಿದ ವಚನಭ್ರಷ್ಟರೊಂದಿಗೆ ಮೈತ್ರಿ ಎಷ್ಟು ಸರಿ?: ರೇಣುಕಾಚಾರ್ಯ
ಜಮಖಂಡಿ ಶಾಸಕ ಜಗದೀಶ್ ಗುಡಗುಂಟಿ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಬಿಜೆಪಿ ಇತಿಹಾಸ ಮತ್ತು ವಿಕಾಸ ಎಂಬ ವಿಷಯದ ಮೇಲೆ ಮಾಜಿ ಸಚಿವ ಸುರೇಶ್ಕುಮಾರ ಉಪನ್ಯಾಸ ಮಾಡಲಿದ್ದಾರೆ. ಮುಂದಿನ ಲೋಕಸಭೆ ಚುನಾವಣೆ ಬಗ್ಗೆ ಕಾರ್ಯಕರ್ತರನ್ನು ಉದ್ದೇಶಿಸಿ ಬೊಮ್ಮಾಯಿ, ಕಾರಜೋಳ ಭಾಷಣ ಮಾಡಲಿದ್ದಾರೆ. ಈ ಸಮಾವೇಶವು ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ.
The post BJP: ಇಂದು ಜಮಖಂಡಿ ಮತಕ್ಷೇತ್ರದ ಬಿಜೆಪಿ ಕಾರ್ಯಕರ್ತರ ಸಮಾವೇಶ appeared first on Ain Live News.