Home ರಾಜಕೀಯ ಬಿಜೆಪಿ ಅಭ್ಯರ್ಥಿ ಎಸ್.ಸುರೇಶ್ ಕುಮಾರ್ ಪಾದಯಾತ್ರೆ ಮೂಲಕ 6ನೇ ಬಾರಿಗೆ ನಾಮಪತ್ರ ಸಲ್ಲಿಕೆ

ಬಿಜೆಪಿ ಅಭ್ಯರ್ಥಿ ಎಸ್.ಸುರೇಶ್ ಕುಮಾರ್ ಪಾದಯಾತ್ರೆ ಮೂಲಕ 6ನೇ ಬಾರಿಗೆ ನಾಮಪತ್ರ ಸಲ್ಲಿಕೆ

30
0
BJP candidate Suresh Kumar submitted nomination papers for 6th time

ಬೆಂಗಳೂರು:

ಮಾಜಿ ಸಚಿವರು, ಶಾಸಕರಾದ ಶ್ರೀ ಎಸ್.ಸುರೇಶ್ ಕುಮಾರ್ ರವರು ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಿದರು.

ಶ್ರೀ ರಾಮಮಂದಿರ ವಾರ್ಡ್ ಶ್ರೀರಾಮಮಂದಿರದಲ್ಲಿ ವಿಶೇಷ ಪೂಜೆ ಸಲ್ಲಿಸಿ ಮೇರುನಟ ಡಾ.ರಾಜ್ ಕುಮಾರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಸಾವಿರಾರು ಬಿಜೆಪಿ ಕಾರ್ಯಕರ್ತರ ಜೊತೆಯಲ್ಲಿ ಪಾದಯಾತ್ರೆ ಮೂಲಕ ರಾಜಾಜಿನಗರ ಆರ್.ಟಿ.ಓ.ಕಛೇರಿ ವರಗೆ ತೆರಳಿ ಬಿಬಿಎಂಪಿ ಕಛೇರಿಯಲ್ಲಿ ನಾಮಪತ್ರ ಸಲ್ಲಿಸಿದರು.

ಲೋಕಸಭಾ ಸದಸ್ಯರಾದ ಪಿ.ಸಿ.ಮೋಹನ್, ರಾಜಾಜಿನಗರ ಪ್ರಭಾರಿ ವಾಸು, ಶ್ರೀಮತಿ ಸಾವಿತ್ರಿ ಸುರೇಶ್ ಕುಮಾರ್, ಮಾಜಿ ಉಪಮಹಾಪೌರರಾದ ರಂಗಣ್ಣ, ಮಾಜಿ ಮಹಾನಗರ ಪಾಲಿಕೆ ಸದಸ್ಯರುಗಳಾದ ಮುನಿರಾಜು, ರಾಜಣ್ಣ,ಹೆಚ್.ಆರ್.ಕೃಷ್ಣಪ್ಪ, ರವೀಂದ್ರನ್, ದೀಪಾ ನಾಗೇಶ್ ರವರು ಭಾಗವಹಿಸಿದ್ದರು.

BJP candidate Suresh Kumar submitted nomination papers for 6th time

ಎಸ್.ಸುರೇಶ್ ಕುಮಾರ್ ರವರು ಬಾಲ್ಯದಿಂದಲೂ ರಾಷ್ಟ್ರೀಯ ಸ್ವಯಂ ಸೇವಕ ಸಂಘದಲ್ಲಿ ಸಂಭಂದ. 1977ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಸೆರವಾಸ ಅಲ್ಲಿ ರಾಷ್ಟ್ರೀಯ ಮಟ್ಟದ ನಾಯಕರುಗಳ ಜೊತೆ ಒಡನಾಟ. ಬೆಂಗಳೂರು ವಿಶ್ವವಿದ್ಯಾಲಯದಿಂದ ವಿಜ್ಞಾನ ಪದವಿ, ನಂತರ ಕಾನೂನು ಪದವಿ ಪಡೆದು ವಕೀಲ ವೃತ್ತಿ ಆರಂಭಿಸಿದರು. ಬೆಂಗಳೂರುನಗರ ಯುವ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದರು.

1983 ಮತ್ತು 1990ರಲ್ಲಿ ಬೆಂಗಳೂರು ಮಹಾನಗರ ಪಾಲಿಕೆ ಸದಸ್ಯರಾಗಿ ಸೇವೆ ಮತ್ತು ಐದು ಬಾರಿ ಶಾಸಕರಾಗಿ ಆಯ್ಕೆ (1994, 1999, 2008,2013, 2018) ಮತ್ತು ಕಾನೂನು, ಸಂಸದೀಯ ವ್ಯವಹಾರಗಳು, ಜಲಮಂಡಳಿ, ಕಾರ್ಮಿಕ, ಶಿಕ್ಷಣ ಸಚಿವರಾಗಿ ಸೇವೆ ಸಲ್ಲಿಸಿದರು.

ಮಂಡಲದ ಅಧ್ಯಕ್ಷರಾದ ರಾಘವೇಂದ್ರರಾವ್ ಬಿಜೆಪಿ ಮುಖಂಡರುಗಳಾದ ಬಿ.ಎನ್.ಶ್ರೀನಿವಾಸ್, ಯಶಸ್ ನಾಯಕ್, ಸತೀಶ್ ಭಗವಾನ್ .ಚಲನಚಿತ್ರ ನಿರ್ಮಾಪಕ ಗಂಗಾಧರ್, ಗಿರೀಶ್ ಗೌಡ, ಕರಿಗಿರಿಗೋಪಿ, ವೆಂಕಟೇಶ್ ಬಾಬು, ರಮೇಶ್ ಬಾಬು, ಶ್ರೀನಾಥ್ ಆಯ್ಯರ್, ಕಿರಣ್, ಮುನ್ನಭಾಯಿ,ಆನಿಲ್ ರಂಗಣ್ಣ,ಮೋಹನ್ ರಾಜ್ , ಸಂಜಯ್ ಕುಮಾರ್, ಅಮಿತ್ ಜೈನ್, ಭರತ್ ಗಾಂಧಿ, ವೇಲು, ಪುಟ್ಚ, ಆದರ್ಶ್ ರವರುಗಳು ಭಾಗವಹಿಸಿದ್ದರು

LEAVE A REPLY

Please enter your comment!
Please enter your name here