Home ರಾಜಕೀಯ Bengaluru: ಅಮಿತ್ ಶಾ ನೇತೃತ್ವದಲ್ಲಿ ಬಿಜೆಪಿ – ಜೆಡಿಎಸ್ ಜಂಟಿ ಕೋರ್ ಕಮಿಟಿ ಸಭೆ

Bengaluru: ಅಮಿತ್ ಶಾ ನೇತೃತ್ವದಲ್ಲಿ ಬಿಜೆಪಿ – ಜೆಡಿಎಸ್ ಜಂಟಿ ಕೋರ್ ಕಮಿಟಿ ಸಭೆ

36
0

ಬೆಂಗಳೂರು, ಎ.2: ಚುನಾವಣೆ ಕಾರ್ಯತಂತ್ರಗಳ ಕುರಿತು ಚರ್ಚಿಸಲು ಬಿಜೆಪಿ ಮತ್ತು ಜೆಡಿಎಸ್ ಜಂಟಿ ಕೋರ್ ಕಮಿಟಿ ಸಭೆಯು ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಇಂದು ಬೆಳಗ್ಗೆ ಬೆಂಗಳೂರಿನ ಹೋಟೆಲ್ ತಾಜ್ ವೆಸ್ಟೆಂಡ್ ನಲ್ಲಿ ನಡೆಯಿತು.

ಸಭೆಯಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಬೈ.ವಿಜಯೇಂದ್ರ, ಪ್ರತಿಪಕ್ಷ ನಾಯಕ ಆರ್.ಅಶೋಕ್ ಸೇರಿದಂತೆ ಇನ್ನಿತರ ಮುಖಂಡರು ಭಾಗವಹಿಸಿದ್ದರು.

ಚುನಾವಣಾ ಪ್ರಚಾರದಲ್ಲಿ ಭಾಗವಹಿಸುವುದಕ್ಕಾಗಿ ಮಂಗಳವಾರ ಬೆಳಗ್ಗೆ ನಗರಕ್ಕೆ ಆಗಮಿಸಿದ ಅಮಿತ್ ಶಾ, ತಾಜ್ ವೆಸ್ಟ್ ಎಂಡ್ ಹೋಟೆಲ್ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಬಿಜೆಪಿ ನಾಯಕರ ಜತೆ ಮೊದಲ ಸುತ್ತಿನ ಸಭೆ ನಡೆಸಿದ ಅವರು ಚುನಾವಣಾ ಸಿದ್ಧತೆ ಮತ್ತು ರಾಜ್ಯದಲ್ಲಿನ ರಾಜಕೀಯ ಸ್ಥಿತಿಗತಿ ಕುರಿತು ಮಾಹಿತಿ ಪಡೆದರು.

ಇದಕ್ಕೂ ಮೊದಲು ಬೆಂಗಳೂರಿಗೆ ಆಗಮಿಸಿದ ಕೇಂದ್ರ ಗೃಹ ಸಚಿವ  ಅಮಿತ್ ಶಾ ಅವರನ್ನು ಬಿಜೆಪಿ  ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆತ್ಮೀಯವಾಗಿ ಸ್ವಾಗತಿಸಿದರು.

 

 

LEAVE A REPLY

Please enter your comment!
Please enter your name here