ಬೆಂಗಳೂರು: ಬೆಳಗಾವಿಗೆ ಇಂದು ಆಗಮಿಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ವಿಮಾನನಿಲ್ದಾಣದಲ್ಲಿ ಆತ್ಮೀಯ ಸ್ವಾಗತ ಕೋರಲಾಯಿತು. ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ನಡ್ಡಾ ಅವರನ್ನು ಸ್ವಾಗತಿಸಿದರು. ಸಂಸದೆ ಮಂಗಲ ಅಂಗಡಿ ಸೇರಿದಂತೆ ಪಕ್ಷದ ನಾಯಕರು ಬರಮಾಡಿಕೊಂಡರು.
ಬೂತ್ ಸಮಾವೇಶ ಹಾಗೂ ಪ್ರಬುದ್ಧರ ಸಭೆಯಲ್ಲಿ ಭಾಗವಹಿಸಲು ಬೆಳಗಾವಿಗೆ ಆಗಮಿಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ @JPNadda ಅವರನ್ನು ರಾಜ್ಯಾಧ್ಯಕ್ಷರಾದ ಶ್ರೀ @BYVijayendra ಅವರು ಸ್ವಾಗತಿಸಿದರು.
— BJP Karnataka (@BJP4Karnataka) March 5, 2024
ಈ ಸಂದರ್ಭದಲ್ಲಿ ಸಂಸದರಾದ ಶ್ರೀಮತಿ @MangalSAngadi, ಶಾಸಕರಾದ ಶ್ರೀ @MTenginkai, ರಾಜ್ಯ ಉಪಾಧ್ಯಕ್ಷರಾದ ಶ್ರೀ @BenakeAnil,… pic.twitter.com/qL6cPAWzT6
ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ ರಾಜೀವ್, ರಾಜ್ಯ ಉಪಾಧ್ಯಕ್ಷ ಅನಿಲ್ ಬೆನಕೆ, ರಾಜ್ಯ ಕಾರ್ಯದರ್ಶಿ ಶರಣು ತಳ್ಳಿಕೆರೆ, ಶಾಸಕರಾದ ಸಂಜಯ್ ಪಾಟೀಲ್, ಬೆಳಗಾವಿ ನಗರ ಅಧ್ಯಕ್ಷರಾದ ಗೀತಾ, ಚಿಕ್ಕೋಡಿ ಜಿಲ್ಲಾ ಅಧ್ಯಕ್ಷ ಸತೀಶ್ ಅವರು ಈ ಸಂದರ್ಭದಲ್ಲಿ ಹಾಜರಿದ್ದರು.
ಚಿಕ್ಕೋಡಿಯಲ್ಲಿ ಆಯೋಜಿಸಿರುವ ಬೂತ್ ಮಟ್ಟದ ಕಾರ್ಯಕರ್ತರ ಸಭೆಯಲ್ಲಿ ಭಾಗಿಯಾಗುವರು. ನಂತರ ಬೆಳಗಾವಿಯಲ್ಲಿ ಕೋರ್ ಕಮಿಟಿ ಸಭೆಯಲ್ಲಿ ಪಾಲ್ಗೊಂಡು, ಬುದ್ಧಿಜೀವಿಗಳ ಜೊತೆಗೆ ಸಂವಾದ ನಡೆಸಲಿದ್ದಾರೆ.