ಹುಬ್ಬಳ್ಳಿ;- ಜಾತಿ ಸಮೀಕ್ಷೆ ಬಗ್ಗೆ ರಾಜ್ಯ ಸರ್ಕಾರಕ್ಕೆ ಸ್ಪಷ್ಟತೆಯೇ ಇಲ್ಲ, ಸರ್ಕಾರ ತನ್ನ ಸ್ಪಷ್ಟ ನಿಲುವು ಬಹಿರಂಗಪಡಿಸಲಿ ಎಂದು ಮಾಜಿ ಸಿಎಂ ಬೊಮ್ಮಾಯಿ ಸವಾಲು ಹಾಕಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,160 ಕೋಟಿ ಖರ್ಚು ಮಾಡಿ ಜಾತಿ ಸಮೀಕ್ಷೆ ಮಾಡಿದ್ದು, ಅದು ಯಾವ ಜಾತಿ ಸಮೀಕ್ಷೆ ಅನ್ನೋ ಸ್ಪಷ್ಟತೆ ಇಲ್ಲ. ಅದರ ಬಗ್ಗೆ ಸ್ಪಷ್ಟತೆಯನ್ನು ಸರ್ಕಾರ ಮೊದಲು ಕೊಡಲಿ. ವರದಿ ಆಧಾರದ ಮೇಲೆ ಸಾಧಕ ಬಾಧಕಗಳ ಕುರಿತು ಚರ್ಚಿಸೋಣ ಅಂತ ಕಾಂಗ್ರೆಸ್ ನಾಯಕರು ಹೇಳಿದ್ದಾರೆ. ಈ ಸಮೀಕ್ಷೆಯ ಫಲಶ್ರುತಿ ಸಮಾಜದ ಮೇಲೆ ಯಾವ ಪರಿಣಾಮ ಬೀರುತ್ತೆ, ಅದರ ಫಲಿತಾಂಶ ಏನಾಗುತ್ತೆ. ಕೆಲವರ್ಗದಲ್ಲಿ ಅಸಮಾಧಾನ ಉಂಟಾಗುತ್ತದೆ ಎಂಬ ಬಗ್ಗೆ ಮೊದಲು ಚರ್ಚೆಯಾಗಲಿ ಎಂದರು.
ಇಸ್ರೇಲ್ ಪ್ಯಾಲೆಸ್ಟೈನ್ ಯುದ್ಧ ಹಿನ್ನೆಲೆ ಕಾಂಗ್ರೆಸ್ ಪ್ಯಾಲೆಸ್ಟೈನ್ ಬೆಂಬಲ ವಿಚಾರವಾಗಿ ಮಾತನಾಡಿದ ಅವರು, ಇದೊಂದು ಅಂತಾರಾಷ್ಟ್ರೀಯ ವಿಚಾರ. ಇಸ್ರೇಲ್ ಹಾಗೂ ಪ್ಯಾಲೆಸ್ಟೈನ್ ನಡುವೆ ಬಹಳ ವರ್ಷದ ಸಂಘರ್ಷ ಇದೆ. ಪ್ಯಾಲೆಸ್ಟೈನ್ ಹಮಾಸ್ ಉಗ್ರವಾದಿ ಸಂಘಟನೆ, ಅವರು ಪ್ಯಾಲೆಸ್ಟೈನ್ ನಾಗರಿಕರಲ್ಲ. ಅದನ್ನು ಕಾಂಗ್ರೆಸ್ ಮರೆಮಾಚಲು ಪ್ರಯತ್ನಿಸುತ್ತಿದೆ. ಪ್ಯಾಲೆಸ್ಟೈನ್ನಲ್ಲಿರುವಂತಹ ಭಯೋತ್ಪಾದಕರಿಗೆ ಕಾಂಗ್ರೆಸ್ ಬೆಂಬಲ ನೀಡ್ತಾ ಇದೆ ಎಂದು ಅವರು ಹೇಳಿದರು.
The post Bommai; ರಾಜ್ಯ ಸರ್ಕಾರಕ್ಕೆ ಜಾತಿ ಸಮೀಕ್ಷೆ ಬಗ್ಗೆ ಸ್ಪಷ್ಟತೆ ಇಲ್ಲ – ಮಾಜಿ ಸಿಎಂ ಬೊಮ್ಮಾಯಿ appeared first on Ain Live News.