Home ರಾಜಕೀಯ ಸಚಿವ ಸಂಪುಟ ವಿಸ್ತರಣೆ: ದೆಹಲಿಗೆ ಸಿಎಂ ಬೊಮ್ಮಾಯಿ ದಿಢೀರ್‌ ಭೇಟಿ

ಸಚಿವ ಸಂಪುಟ ವಿಸ್ತರಣೆ: ದೆಹಲಿಗೆ ಸಿಎಂ ಬೊಮ್ಮಾಯಿ ದಿಢೀರ್‌ ಭೇಟಿ

42
0
Bommai leaves for Delhi to consult BJP leadership on cabinet expansion

ಬೆಂಗಳೂರು:

ರಾಜ್ಯದಲ್ಲಿ ನೂತನ ಸಚಿವ ಸಂಪುಟ ರಚನೆ ಕುರಿತು ವರಿಷ್ಠರ ಜೊತೆ ಚರ್ಚಿಸಿ ಅಂತಿಮಗೊಳಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾನುವಾರ ಸಂಜೆ ದೆಹಲಿಗೆ ದಿಢೀರ್‌ ಪ್ರಯಾಣ ಬೆಳೆಸಿದ್ದಾರೆ.

ತಮ್ಮೊಂದಿಗೆ ಸಂಭವನೀಯ ಸಚಿವರ ಪಟ್ಟಿ ಹೊಂದಿರುವ ಮುಖ್ಯಮಂತ್ರಿ, ಹೈಕಮಾಂಡ್ ಒಪ್ಪಿಗೆ ಪಡೆದು ಸೋಮವಾರ ರಾಜ್ಯಕ್ಕೆ ಮರಳಲಿದ್ದಾರೆ.

ಆರ್‌.ಟಿ. ನಗರದ ತಮ್ಮ ನಿವಾಸದಲ್ಲಿ ಸುದ್ದಿಗಾರರ ಜೊತೆ ಭಾನುವಾರ ಸಂಜೆ ಮಾತನಾಡಿದ ಅವರು, ಸಂಜೆ 5:40 ರ ವಿಮಾನದಲ್ಲಿ ದೆಹಲಿಗೆ ಹೋಗುತ್ತಿದ್ದೇನೆ. ಸೋಮವಾರ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿ ಮಾಡುತ್ತೇನೆ. ಸಚಿವ ಸಂಪುಟ ಸೇರುವವರ ಪಟ್ಟಿಯನ್ನು ಅಂತಿಮಗೊಳಿಸಿ ಮರಳುತ್ತೇನೆ ಎಂದಿದ್ದಾರೆ.

Also Read: Bommai leaves for Delhi to consult BJP leadership on cabinet expansion

LEAVE A REPLY

Please enter your comment!
Please enter your name here