ಬಿಜೆಪಿ ನಾಯಕರ ಹೆಸರು ಹೇಳಿಕೊಂಡು ವಂಚಿಸುತ್ತಿದ್ದವನ ಸಿಸಿಬಿ ವಶಕ್ಕೆ
ಬೆಂಗಳೂರು:
ಆರ್ಎಸ್ಎಸ್ ನಾಯಕ ಹಾಗೂ ಅಮಿತ್ ಶಾ, ಜೆಪಿ ನಡ್ಡಾ ಸೇರಿ ಇತರೆ ಬಿಜೆಪಿ ನಾಯಕರ ಹೆಸರು ಹೇಳಿಕೊಂಡು ಜನರನ್ನು ವಂಚಿಸುತ್ತಿದ್ದ ಯುವರಾಜ್ ಎಂಬಾತನ ನಿವಾಸದ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಯುವರಾಜ್, ಬಿಜೆಪಿ ನಾಯಕರೊಂದಿಗೆ ಭಾವಚಿತ್ರ ತೆಗೆಸಿಕೊಂಡು ತಾನು ಬಹಳಷ್ಟು ಮಂದಿ ಬಿಜೆಪಿ ನಾಯಕರೊಂದಿಗೆ ಆತ್ಮೀಯನಾಗಿದ್ದೇನೆ ಎಂದು ನಂಬಿಸುತ್ತಿದ್ದನು.
