ಚಾಮರಾಜನಗರ: ಕೊಟ್ಟ ಮಾತಿನಂತೆ ಹಗಲು ಹೊತ್ತಿನಲ್ಲಿ ಪ್ರತಿನಿತ್ಯ 7 ತಾಸು ವಿದ್ಯುತ್ ಕೊಡಿ ಎಂದು ಆಗ್ರಹಿಸಿ ಅನ್ನಧಾತರು ಆಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸುತ್ತಿದ್ದಾರೆ. ಗಡಿಜಿಲ್ಲೆ ಚಾಮರಾಜನಗರದಲ್ಲಿ ರೈತಪರ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಚಾಮರಾಜೇಶ್ವರ ದೇವಸ್ಥಾನದ ಆವರಣದಿಂದ ಪ್ರತಿಭಟನಾ ಮೆರವಣಿಗೆ ನಡೆಸಿದ ರೈತ ಮುಖಂಡರುಗಳು, ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಧರಣಿ ಸತ್ಯಾಗ್ರಹ ಹಮ್ಮಿಕೊಂಡಿದ್ದಾರೆ.
ಸರ್ಕಾರ ಚುನಾವಣೆ ಸಂದರ್ಭದಲ್ಲಿ ರೈತರ ಪಂಪ್ ಸೆಟ್ಗಳಿಗೆ 07 ಗಂಟೆ ವಿದ್ಯುತ್ ಕೊಡುತ್ತೇವೆ ಎಂದು ಭರವಸೆ ನೀಡಿದ್ದರು, ಆದರೆ ಸರ್ಕಾರ ಅಧಿಕಾರಕ್ಕೆ ಬಂದಮೇಲೆ ಅಧಿಕಾರಿಗಳು ಕೇವಲ ಎರಡು ತಾಸು ವಿದ್ಯುತ್ ಪೂರೈಕೆ ಮಾಡುತ್ತಿದ್ದಾರೆ. ಒಂದೆಡೆ ಮಳೆಯಿಲ್ಲದೆ ಬೆಳೆಗಳು ಒಣಗುತ್ತಿದೆ. ಮತ್ತೊಂದೆಡೆ ವಿದ್ಯುತ್ ಇಲ್ಲದೆ ನೀರಾವರಿ ಬೆಳೆಗಳು ಒಣಗುತ್ತಿದೆ.
https://ainlivenews.com/do-you-know-the-benefits-of-drinking-black-tea-every-day/̤
ಆದರೆ ಸರ್ಕಾರವಾಗಲಿ, ಜನ ಪ್ರತಿನಿಧಿಗಳಾಗಲಿ ನಮ್ಮ ಸಮಸ್ಯೆಗೆ ಸ್ಪಂದಿಸುತ್ತಿಲ್ಲ. ಹೀಗಾಗಿ ನಮ್ಮ ಬೇಡಿಕೆ ಈಡೇರುವ ತನಕ ನಾವು ಸತ್ಯಾಗ್ರಹ ಮಾಡುತ್ತೇವೆ, ನಮ್ಮ ಬೇಡಿಕೆಗೆ ಸ್ಪಂದಿಸದಿದ್ದರೆ ಯಾವುದೇ ಜನಪ್ರತಿನಿಧಿಗಳಾಗಲಿ, ಸಚಿವರಾಗಲಿ ಜಿಲ್ಲೆಗೆ ಬಂದರೆ ಅವರು ಯಾವುದೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶ ಕೊಡದೆ ಘೇರಾವ್ ಹಾಕುವುದಾಗಿ ಎಚ್ಚರಿಸಿದ್ದಾರೆ.
The post Chamarajanagar: 7 ತಾಸು ನಿರಂತರ ಕರೆಂಟ್ ಕೊಡಿ: ಅನ್ನಧಾತರಿಂದ ಆಹೋರಾತ್ರಿ ಧರಣಿ appeared first on Ain Live News.