Home ಕಲಬುರ್ಗಿ Covid-19: ಗಡಿ ಸಂಪರ್ಕವಿರುವ ಹಳ್ಳಿಗಳ ಮಟ್ಟದಲ್ಲಿ ತಪಾಸಣೆ ನಡೆಸಲು ಮುಖ್ಯಮಂತ್ರಿ ಸೂಚನೆ

Covid-19: ಗಡಿ ಸಂಪರ್ಕವಿರುವ ಹಳ್ಳಿಗಳ ಮಟ್ಟದಲ್ಲಿ ತಪಾಸಣೆ ನಡೆಸಲು ಮುಖ್ಯಮಂತ್ರಿ ಸೂಚನೆ

62
0
Advertisement
bengaluru

ಕಲ್ಬುರ್ಗಿ/ಬೆಂಗಳೂರು:

ವಿಶ್ವದಲ್ಲಿ ಪುನ: ಕರೋನಾ ಹೆಚ್ಚಳವಾಗಿದ್ದು, ವಿಶ್ವ ಆರೋಗ್ಯ ಸಂಸ್ಥೆ ಹಾಗೂ ಭಾರತ ಸರ್ಕಾರ ಎಚ್ಚರಿಕೆ ನೀಡಿ, ಹಲವಾರು ಮಾರ್ಗದರ್ಶನವನ್ನು ನೀಡಿದೆ. ಮಹಾರಾಷ್ಟ್ರ ಹಾಗೂ ಕೇರಳದಲ್ಲಿ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇದರ ಪರಿಣಾಮ ಕರ್ನಾಟಕದ ಮೇಲೆಯೂ ಆಗುತ್ತದೆ. ಗಡಿಗಳಲ್ಲಿ ಕಠಿಣ ಕ್ರಮಗಳನ್ನು ಜಾರಿ ಮಾಡಲಾಗಿದೆ. ಎರಡು ಡೋಸು ಹಾಗೂ ಆರ್ ಟಿ ಪಿಸಿಆರ್ ಪರೀಕ್ಷೆ ಕಡ್ಡಾಯ ಮಾಡಲಾಗಿದೆ. ಕರ್ನಾಟಕದಲ್ಲಿ ಕಳೆದೊಂದು ವಾರದಿಂದ ಕೋವಿಡ್ ಹಾಗೂ ಒಮಿಕ್ರಾನ್ ಪ್ರಕರಣಗಳಲ್ಲಿ ಏರಿಕೆಯಾಗಿದೆ. ಕೋವಿಡ್ ನಿಯಂತ್ರಣಕ್ಕೆ ಬರುವ ದಿನಗಳಲ್ಲಿ ದೀರ್ಘಾವಧಿಯ ಯೋಜನೆಯನ್ನು ರೂಪಿಸಬೇಕಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಕೋವಿಡ್ ನ 1 ಹಾಗೂ 2 ನೇ ಅಲೆ ನಿರ್ವಹಣೆಯ ಅನುಭವ ಹೊಂದಿದ್ದು, ಆರೋಗ್ಯ ಮೂಲಸೌಕರ್ಯಗಳನ್ನು ವೃದ್ಧಿಸಲು ಈಗಾಗಲೇ ಸೂಚನೆ ನೀಡಲಾಗಿದೆ. ಬೆಡ್ಸ್, ಐಸಿಯು, ಆಕ್ಸಿಜನ್ ಬೆಡ್ಸ್ ಗಳನ್ನು ಹೆಚ್ಚಿಸಲಾಗಿದೆ. ಜಿಲ್ಲೆಗಳಿಂದ ಔಷಧಿಗಳ ಬೇಡಿಕೆಯನ್ನು ತರಿಸಿಕೊಳ್ಳಲಾಗಿದೆ. ಚಿಕಿತ್ಸಾ ಸೌಲಭ್ಯಗಳಲ್ಲಿ ಯಾವುದೇ ರೀತಿಯ ಕೊರತೆಯಾಗದಂತೆ ಸಿದ್ಧತೆ ಮಾಡಿಕೊಳ್ಳಲು ಸೂಚಿಸಲಾಗಿದೆ. ಶಾಲೆಗಳಿಗೆ ರಜೆ ಘೋಷಿಸುವ ಬಗ್ಗೆ ತಜ್ಞರ ಸಲಹೆಯ ಮೇರೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಮಹಾರಾಷ್ಟ್ರ ಹಾಗೂ ಕೇರಳ ಜಿಲ್ಲೆಗಳ ಗಡಿ ಪ್ರದೇಶಗಳ ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆ ಸಮರ್ಪಕವಾಗಿ ನಡೆಯುತ್ತಿಲ್ಲ ಎಂಬುದಕ್ಕೆ ಪ್ರತಿಕ್ರಯಿಸಿ, ಗಡಿ ಪ್ರದೇಶಗಳು ವ್ಯಾಪಕವಾಗಿದೆ. ಪ್ರಮುಖ ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆಗಳು ಆಗುತ್ತಿದೆ. ಗಡಿ ಸಂಪರ್ಕವಿರುವ ಹಳ್ಳಿಗಳ ಮಟ್ಟದಲ್ಲಿ ತಪಾಸಣೆ ನಡೆಸಲು ಸಿಬ್ಮಂದಿ ನಿಯೋಜಿಸಿ ಚೆಕ್ ಪೋಸ್ಟ್ ಮಾಡುವ ಜೊತೆಗೆ ಆಯಾ ವ್ಯಾಪ್ತಿಯ ಪೊಲೀಸ್ ಸ್ಟೇಷನ್ ಗಳಿಗೆ ಈ ಹೊಣೆಗಾರಿಕೆಯನ್ನು ವಹಿಸಲಾಗುವ ಬಗ್ಗೆ ಇಂದು ಸಂಜೆ ಸಭೆಯಲ್ಲಿ ಸೂಚಿಸಲಾಗುವುದು ಎಂದರು.

bengaluru bengaluru

ಆರ್ಥಿಕ ಚಟುವಟಿಕೆಗಳ ಜೊತೆಗೆ ಸುರಕ್ಷತಾ ಕ್ರಮಗಳ ಬಗ್ಗೆ ಚಿಂತನೆ: ಲಾಕ್ ಡೌನ್, ಸೆಮಿ ಲಾಕ್ ಡೌನ್, ವೀಕೆಂಡ್ ಲಾಕ್ ಡೌನ್ ಹೇರುವ ಸಾಧ್ಯತೆಗಳ ಬಗ್ಗೆ ಪ್ರತಿಕ್ರಿಯೆ ನೀಡಿ, ಕೋವಿಡ್ ನ ಸ್ಥಿತಿಗತಿ, ಮುಂದಿನ ದಿನಗಳಲ್ಲಿ ಆಗಬಹುದಾದ ಬೆಳವಣಿಗೆಗ ಬಗ್ಗೆ ಇಂದಿನ ಸಭೆಯಲ್ಲಿ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಗಲಾಗುವುದು. ಕೋವಿಡ್ ನ ಎರಡೂ ಅಲೆಗಳ ಸಂದರ್ಭದಲ್ಲಿ ಆರ್ಥಿಕ ಹಿಂಜರಿಕೆ ಉಂಟಾಗಿತ್ತು, ಈಗ ಆರ್ಥಿಕ ಪರಿಸ್ಥಿತಿಇ ಸುಧಾರಿಸುತ್ತಿದೆ. ಆದ್ದರಿಂದ ಆರ್ಥಿಕ ಚಟುವಟಿಕೆಗಳಿಗೂ ತೊಂದರೆಯಾಗದಂತೆ ನೋಡಿಕೊಳ್ಳುವ ಜೊತೆಗೆ ಸುರಕ್ಷತಾ ಕ್ರಮಗಳ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ ಎಂದು ತಿಳಿಸಿದರು.

ಜನರ ಸಹಕಾರ ಬಹಳ ಮುಖ್ಯ: ಕೋವಿಡ್ ನಿಯಂತ್ರಣದಲ್ಲಿ ಜನರ ಸಹಕಾರ ಬಹಳ ಮುಖ್ಯ. ರಾಜ್ಯ ಸರ್ಕಾರದ ನಿಯಂತ್ರಣ ಕ್ರಮಗಳು ಹಾಗೂ ಮಾರ್ಗಸೂಚಿಗಳನ್ನು ಸಾರ್ವಜನಿಕರು ಕಡ್ಡಾಯವಾಗಿ ಪಾಲಿಸಬೇಕೆಂದು ಮುಖ್ಯಮಂತ್ರಿಗಳು ಮನವಿ ಮಾಡಿದರು.


bengaluru

LEAVE A REPLY

Please enter your comment!
Please enter your name here