ಬೆಂಗಳೂರು: ಜಾತಿ ಜನಗಣತಿ ಪಡೆಯದಿರುವಂತೆ ಒಕ್ಕಲಿಗರ ಸಂಘ ಮನವಿ ಸಲ್ಲಿಸಿದ್ದು, ವರದಿ ಕೊಡುವ ಮುನ್ನವೇ ಏಕೆ ವಿರೋಧಿಸುತ್ತಿದ್ದೀರಿ ಎಂದು ಹೇಳಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
BBMP New rules: ಬೆಸ್ಕಾಂ ದುರಂತಕ್ಕೆ ತಾಯಿ, ಮಗು ಬಲಿ: ನಗರದಲ್ಲಿ ಕಠಿಣ ರೂಲ್ಸ್ ಜಾರಿಗೆ BBMP ಸಜ್ಜು!
ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು. ಜಾತಿ ಜನಗಣತಿ ವರದಿ ಇನ್ನೂ ನಮ್ಮ ಕೈ ಸೇರಿಲ್ಲ. ಕೊಟ್ಟ ಮೇಲೆ ತೀರ್ಮಾನ ಕೈಗೊಳ್ಳಲಾಗುವುದು ಎಂದರು. ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸೇರಿದಂತೆ ಒಕ್ಕಲಿಗ ಸಮುದಾಯದ ಮುಖಂಡರು ಜಾತಿ ಜನಗಣತಿ ವರದಿ ತಿರಸ್ಕರಿಸಬೇಕೆಂದು ಮನವಿ ಸಲ್ಲಿಸಿರುವ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದರು.
ಮೂಲಪ್ರತಿ ಕಾಣೆಯಾಗಿದೆ ಎಂದು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿ ಈ ಬಗ್ಗೆ ನನಗೆ ತಿಳಿದಿಲ್ಲ ಎಂದರು. ನನ್ನನ್ನು ಭೇಟಿಯಾಗಿ ವರದಿ ಸಲ್ಲಿಸುತ್ತಾರೆ ಎಂದು ತಿಳಿಸಿದರು. ಅಲ್ಲಿಯವರೆಗೆ ಅವಧಿ ವಿಸ್ತರಣೆ ಮಾಡಿ ಎಂದು ಮನವಿ ಮಾಡಿದ್ದರು ಎಂದರು.
The post CM Siddaramaiah: ಜಾತಿ ಜನಗಣತಿ ವರದಿಯ ಮೂಲಪ್ರತಿ ಕಾಣೆಯಾಗಿದರ ಬಗ್ಗೆ ನನಗೆ ತಿಳಿದಿಲ್ಲ: ಸಿಎಂ ಸಿದ್ದರಾಮಯ್ಯ appeared first on Ain Live News.