Home ಬೆಂಗಳೂರು ನಗರ ಸೇತುವೆ ಕಾಮಗಾರಿ ಅವ್ಯವಹಾರ; ತನಿಖೆಗೆ ಆಗ್ರಹಿಸಿ ಬ್ಲಾಕ್ ಕಾಂಗ್ರೆಸ್ ಪ್ರತಿಭಟನೆ

ಸೇತುವೆ ಕಾಮಗಾರಿ ಅವ್ಯವಹಾರ; ತನಿಖೆಗೆ ಆಗ್ರಹಿಸಿ ಬ್ಲಾಕ್ ಕಾಂಗ್ರೆಸ್ ಪ್ರತಿಭಟನೆ

92
0

ಬೆಂಗಳೂರು:

ಸೇತುವೆ ಕಾಮಗಾರಿಯಲ್ಲಿ ನಡೆದಿರುವ ಅವ್ಯವಹಾರ ಕುರಿತು ಸೂಕ್ತ ತನಿಖೆಗೆ ಆಗ್ರಹಿಸಿ ಕಮಲಾನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಪ್ರತಿಭಟನೆ ನಡೆಯಿತು.

ಶಕ್ತಿಗಣಪತಿನಗರ ವಾರ್ಡ್-74ರ 4ನೇ ಮುಖ್ಯರಸ್ತೆಯಲ್ಲಿ ಸೇತುವೆ ಕಾಮಗಾರಿಯಲ್ಲಿ ಅವ್ಯವಹಾರ ನಡೆದಿದ್ದು, ತುರ್ತಾಗಿ ಸೇತುವೆ ನಿರ್ಮಾಣ ಮಾಡಬೇಕೆಂದು ಕಮಲಾನಗರ ಮಾರ್ಕೆಟ್ ವೖತ್ತದಿಂದ ಸೇತುವೆ ನಿರ್ಮಾಣ ಕಾಮಗಾರಿ ಸ್ಥಳದವರೆಗೆ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಪಾದಯಾತ್ರೆ ಮೂಲಕ ಬೃಹತ್ ಪ್ರತಿಭಟನೆ ಮಾಡಿದರು .

IMG 20201201 WA0016

ಆಡಳಿತ ಪಕ್ಷದ ಮಾಜಿ ನಾಯಕ ಎಮ್.ಶಿವರಾಜು ಮಾತನಾಡಿ, ಕಳೆದ ಒಂದು ವರ್ಷಗಳ ಹಿಂದೆ ಸೇತುವೆ ಕಾಮಗಾರಿ ವರ್ಕ್ ಆರ್ಡರ್ ಮತ್ತು ಜಾಬ್ ಕೋಡ್ ಇಲ್ಲದೇ ಮತ್ತು ಟೆಂಡರ್ ಕರೆಯದೇ ತರಾತುರಿಯಲ್ಲಿ ಕಾಮಗಾರಿ ಪ್ರಾರಂಭಿಸಿ ,ನಂತರ ನಿಲ್ಲಿಸಿದ್ದಾರೆ. ಸೇತುವೆ ಕಾಮಗಾರಿ ಯಾವುದೇ ಆನುಮೋದನೆ ಇಲ್ಲದೇ ಕಾಮಗಾರಿ ಆರಂಭಿಸಿರುವುದು ನೋಡಿದರೆ ಅಧಿಕಾರಿಗಳು ಭ್ರಷ್ಟಾಚಾರ ಎಸಗಿರುವುದು ಕಂಡು ಬರುತ್ತದೆ. ಈ ಭಾಗದಲ್ಲಿ ಕಳೆದ ಬಾರಿ ಮಳೆಯಿಂದ ಭಾರಿ ನಷ್ಟಗಳು ಸಂಭವಿಸಿದೆ. ಸೇತುವೆ ಕಾಮಗಾರಿಗಳಲ್ಲಿ ಅವ್ಯವಹಾರ ಮಾಡಿರುವ ಇಂಜನಿಯರ್ ಗಳು ,ಅಧಿಕಾರಿಗಳನ್ನು ಕೂಡಲೆ ಅಮಾನತು ಮಾಡಿ ಸೂಕ್ತ ತನಿಖೆ ಮಾಡಬೇಕು ಮತ್ತು ತುರ್ತಾಗಿ ಸೇತುವೆ ನಿರ್ಮಾಣ ಮಾಡಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕೆಂದು ಬಿ.ಬಿ.ಎಂ.ಪಿ.ಆಯುಕ್ತರಿಗೆ ಒತ್ತಾಯಿಸಲಾಗಿದೆ ಎಂದರು.

ಇನ್ನು ಪ್ರತಿಭಟನೆಯನ್ನು ಗಮನಿಸಿ ಪ್ರತಿಭಟನಾ ಸ್ಥಳಕ್ಕೆ ಕಾರ್ಯಪಾಲಕ ಅಭಿಯಂತರ ತಿಮ್ಮರಸು ಮತ್ತು ಅಧಿಕಾರಿಗಳ ತಂಡ ಆಗಮಿಸಿ , ಇನ್ನು 15 ದಿನಗಳ ಒಳಗೆ ಸೇತುವೆ ಕಾಮಗಾರಿ ಆರಂಭಿಸಲಾಗುವುದು ಎಂದು ಭರವಸೆ ನೀಡಿದರು.

ಪ್ರತಿಭಟನೆಯಲ್ಲಿ ಕಮಲಾನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಎನ್.ಕುಮಾರ್ ನರಸಿಂಹಮೂರ್ತಿ, ಮಹಿಳಾ ಕಾಂಗ್ರೆಸ್ ,ಯುವ ಕಾಂಗ್ರೆಸ್ ವಿವಿಧ ಘಟಕಗಳ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here