Home Uncategorized DK Shivakumar; ಜನರಹಿತ ಪ್ರದೇಶಕ್ಕೆ ಕಸ ವಿಲೇವಾರಿ ಘಟಕ ಸ್ಥಳಾಂತರ – DCM ಡಿಕೆಶಿ

DK Shivakumar; ಜನರಹಿತ ಪ್ರದೇಶಕ್ಕೆ ಕಸ ವಿಲೇವಾರಿ ಘಟಕ ಸ್ಥಳಾಂತರ – DCM ಡಿಕೆಶಿ

34
0

ಬೆಂಗಳೂರು;- ಜನರಹಿತ ಪ್ರದೇಶಕ್ಕೆ ಕಸ ವಿಲೇವಾರಿ ಘಟಕ ಸ್ಥಳಾಂತರಗೊಳ್ಳಲಿದೆ ಎಂದು DCM ಡಿಕೆ ಶಿವಕುಮಾರ್ ಹೇಳಿದ್ದಾರೆ.

ಈ ಸಂಬಂಧ ಮಾತನಾಡಿದ ಅವರು,ಜನ ಸಾಮಾನ್ಯರ ತೊಂದರೆ ನಿವಾರಣೆಗೆ ಯಶವಂತಪುರ ವಿಧಾನಸಭೆ ಕ್ಷೇತ್ರದ 5, ಬ್ಯಾಟರಾಯನಪುರದ 2, ದಾಸರಹಳ್ಳಿ, ಆನೇಕಲ್, ಮಹದೇವಪುರ ಕ್ಷೇತ್ರದಲ್ಲಿನ ಕಸ ವಿಲೇವಾರಿ ಘಟಕಗಳನ್ನು ಸ್ಥಳಾಂತರಿಸಲಾಗುವುದು ಎಂದರು.

ಕಂದಾಯ ಹಾಗೂ ಅರಣ್ಯ ಇಲಾಖೆಗಳ ಜತೆ ಚರ್ಚೆ ನಡೆಸಿ ಪರ್ಯಾಯ ಜಾಗಗಳನ್ನು ಗುರುತಿಸಲಾಗುತ್ತಿದೆ ಎಂದ ಅವರು, ಬೆಂಗಳೂರು ಅಪಾರವಾಗಿ ಬೆಳದ ಪರಿಣಾಮ ಕಸ ವಿಲೇವಾರಿ ಘಟಕಗಳು ನಗರದ ಹೃದಯ ಭಾಗಕ್ಕೆ ಬಂದಿವೆ. ಈ ಘಟಕಗಳ ಸುತ್ತಮುತ್ತ ನಾಲ್ಕೈದು ಕಿ.ಮೀ. ವರೆಗೆ ನಾಗರಿಕರು ನರಕಯಾತನೆ ಅನುಭವಿಸುತ್ತಿದ್ದಾರೆ ಎಂದರು.

The post DK Shivakumar; ಜನರಹಿತ ಪ್ರದೇಶಕ್ಕೆ ಕಸ ವಿಲೇವಾರಿ ಘಟಕ ಸ್ಥಳಾಂತರ – DCM ಡಿಕೆಶಿ appeared first on Ain Live News.

LEAVE A REPLY

Please enter your comment!
Please enter your name here