Home Uncategorized DK Shivakumar; ಮುನಿರತ್ನ ನನ್ನ ಕಾಲಿಗೆ ಬಿದ್ದು ಸೀನ್ ಕ್ರಿಯೇಟ್ ಮಾಡಿದ್ದು ಸರಿಯಲ್ಲ – DCM...

DK Shivakumar; ಮುನಿರತ್ನ ನನ್ನ ಕಾಲಿಗೆ ಬಿದ್ದು ಸೀನ್ ಕ್ರಿಯೇಟ್ ಮಾಡಿದ್ದು ಸರಿಯಲ್ಲ – DCM ಡಿಕೆಶಿ

26
0

ಬೆಂಗಳೂರು;- ಅನುದಾಕ್ಕಾಗಿ ಕಾಲಿಗೆ ಬಿದ್ದು ಸೀನ್ ಕ್ರಿಯೇಟ್ ಮಾಡುವ ಅಗತ್ಯ ಇರಲಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಈ ಸಂಬಂಧ ಮಾತನಾಡಿದ ಅವರು,ಮುನಿರತ್ನ ರಾಜರಾಜೇಶ್ವರಿ ಕ್ಷೇತ್ರಕ್ಕೆ ಅನುದಾನದ ವಿಚಾರವಾಗಿ ಚರ್ಚೆ ನಡೆಸಿದರು. ‘ದ್ವೇಷದ ರಾಜಕಾರಣ’ ಎಂದು ಹೇಳಿದರು. ಅದಕ್ಕೆ ನಾನು ಬಿಜೆಪಿ ಸರ್ಕಾರವಿದ್ದಾಗ ಕಾಂಗ್ರೆಸ್ ಶಾಸಕರ ಅನುದಾನಕ್ಕೇಕೆ ಕತ್ತರಿ ಹಾಕಿದ್ದರು? ಹೋಗಿ ಯಡಿಯೂರಪ್ಪ ಹಾಗೂ ಬೊಮ್ಮಾಯಿ ಅವರನ್ನೇ ಕೇಳಿ ನೋಡಿ. ಕನಕಪುರಕ್ಕೆ ಬಂದಿದ್ದ ವೈದ್ಯಕೀಯ ಕಾಲೇಜನ್ನು ಹೇಗೆ ತೆಗೆದರು?. ಅದನ್ನು ಯಾವ ರಾಜಕಾರಣ ಎಂದು ಕರೆಯುತ್ತಾರೆ ಎಂದು ಮುನಿರತ್ನರಿಗೆ ಕೇಳಿದ್ದಾಗಿ ತಿಳಿಸಿದರು.

ಅದಕ್ಕೆ ಮುನಿರತ್ನ, ನಾನು ಚಿಕ್ಕವನು. ಇದಕ್ಕೆಲ್ಲ ನನ್ನನ್ನು ಮುಂದೆ ಬಿಡಬೇಡಿ ಎಂದರು. ಇನ್ನೂ ಅನೇಕ ವಿಚಾರಗಳು ಚರ್ಚೆಯಾದವು. ಅದನ್ನೆಲ್ಲಾ ಮಾಧ್ಯಮಗಳಿಗೆ ಹೇಳಲು ಆಗುವುದಿಲ್ಲ. ನಿಮಗೆ ಅದೆಲ್ಲಾ ಅರ್ಥವಾಗಿರುತ್ತದೆ. ಕಾಲಿಗೆ ಬೀಳುವುದೆಲ್ಲ ಇಟ್ಟುಕೊಳ್ಳಬೇಡಿ, ಸುಮ್ಮನೆ ಹೊರಡಿ ಎಂದು ಅವರಿಗೆ ಹೇಳಿದೆ ಎಂದರು.

ಸರ್ಕಾರದಿಂದ ಕಾಮಗಾರಿಗಳ ತನಿಖೆ ನಡೆಸಲಾಗುವುದೇ ಎನ್ನುವ ಪ್ರಶ್ನೆಗೆ, ಈಗಾಗಲೇ ತನಿಖೆ ನಡೆಯುತ್ತಿದೆಯಲ್ಲಾ. ಯಾರು ಸರಿಯಾಗಿ ಕೆಲಸ ಮಾಡಿದ್ದಾರೋ ಅವರಿಗೆ ಬಿಲ್ ಬಿಡುಗಡೆ ಮಾಡಲಾಗುವುದು. ಬೊಮ್ಮಾಯಿ ಸಾಹೇಬರು ವಿಧಾನಸಭೆಯಲ್ಲಿ ವರದಿ ನೀಡಿ, ಹೇಳಿಕೆ ನೀಡಿದ್ದರು. ಮುನಿರತ್ನ ಸಹ ನನ್ನ ಕ್ಷೇತ್ರದಲ್ಲಿ ಅನ್ಯಾಯ ನಡೆದಿದೆ ಎಂದು ಪತ್ರ ಬರೆದಿದ್ದರು. ಅದನ್ನೆಲ್ಲಾ ತನಿಖೆಗೆ ನೀಡಿದ್ದೇವೆ. ಬೊಮ್ಮಾಯಿ ಹಾಗೂ ಇವರು ಹೇಳಿದ್ದಕ್ಕೆ ಲೋಕಾಯುಕ್ತ ತನಿಖೆಗೆ ನೀಡಿದ್ದೇವೆ. ವರದಿ ಬಂದ ಬಳಿಕ ಕಾನೂನು ಪ್ರಕಾರ ಏನು ಕ್ರಮ ತೆಗೆದುಕೊಳ್ಳಬೇಕೋ ಅದನ್ನು ತೆಗೆದುಕೊಳುತ್ತೇವೆ ಎಂದು ತಿಳಿಸಿದರು.

The post DK Shivakumar; ಮುನಿರತ್ನ ನನ್ನ ಕಾಲಿಗೆ ಬಿದ್ದು ಸೀನ್ ಕ್ರಿಯೇಟ್ ಮಾಡಿದ್ದು ಸರಿಯಲ್ಲ – DCM ಡಿಕೆಶಿ appeared first on Ain Live News.

LEAVE A REPLY

Please enter your comment!
Please enter your name here