Home Uncategorized DK Sivakumar: ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಿ ಸೋತು ಮನೆಗೆ ಹೋಗಿದ್ದೆ: ಡಿ.ಕೆ.ಶಿವಕುಮಾರ್

DK Sivakumar: ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಿ ಸೋತು ಮನೆಗೆ ಹೋಗಿದ್ದೆ: ಡಿ.ಕೆ.ಶಿವಕುಮಾರ್

39
0

ಮೈಸೂರು: ನನ್ನ 14 ನೇ ವಯಸ್ಸಿನಲ್ಲಿ ದಸರಾ ಕ್ರೀಡಾಕೂಟದ ಜೂನಿಯರ್ ವಿಭಾಗದ ಜಾವಲಿನ್ ಎಸೆತ ಮತ್ತು 14.5 ಕಿಲೋ ಮೀಟರ್ ದೂರದ ಓಟದ ಸ್ಪರ್ಧೆಯಲ್ಲಿ ಭಾಗವಹಿಸಿ ಸೋತು ಮನೆಗೆ ಹೋಗಿದ್ದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹಳೆಯ ನೆನಪನ್ನು ಮೆಲುಕು ಹಾಕಿದರು.

ಮೈಸೂರು ದಸರಾ ಕ್ರೀಡಾಕೂಟ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು “ನೀವು ಕುಳಿತ ಜಾಗದಲ್ಲೇ ನಾನು ಕುಳಿತುಕೊಂಡಿದ್ದೆ. ಗ್ರಾಮೀಣ ಭಾಗದಿಂದ ಬಂದಂತಹ ನೀವೆಲ್ಲಾ ನನ್ನಂತೆ ನಾಯಕರಾಗಿ ಹೊರಹೊಮ್ಮಬೇಕು. ಕ್ರೀಡಾ ಕ್ಷೇತ್ರದಲ್ಲಿ ಭಾರತಕ್ಕೆ ಆಸ್ತಿಗಳಾಗಿ ಬೆಳಗಬೇಕು ಎಂದು ಸ್ಪೂರ್ತಿಯ ಮಾತುಗಳನ್ನಾಡಿದರು. ಜಿಲ್ಲಾ ಉಸ್ತುವಾರಿ ಮಂತ್ರಿಗಳಾದ ಮಹದೇವಪ್ಪ ಅವರ ಮನವಿ ಮೇರೆಗೆ ಬಂದು ಸಂತೋಷದಿಂದ ಕ್ರೀಡಾಜ್ಯೋತಿಯನ್ನು ಸ್ವೀಕರಿಸಿದ್ದೇ‌ನೆ. ಕ್ರೀಡಾಕೂಟದ ಉದ್ಘಾಟನೆ ಮಾಡಿದ್ದು ಬಹಳ ಸಂತಸ ನೀಡಿತು ಎಂದು ಹೇಳಿದರು.

ಮಗಳ ಮೇಲೆ ಅತ್ಯಾಚಾರಕ್ಕೆ ಕುಮ್ಮಕ್ಕು ನೀಡಿದ ತಾಯಿ..! ‘ತಾಯ್ತನಕ್ಕೆ ಕಳಂಕ’ ಎಂದ ಹೈಕೋರ್ಟ್

ಒಲಂಪಿಕ್ ಅಸೋಸಿಯೇಶನ್ ಅಧ್ಯಕ್ಷರಾದ ಗೋವಿಂದರಾಜು ಅವರು, ಕ್ರೀಡಾ ಸಚಿವರಾದ ನಾಗೇಂದ್ರ ಅವರು ಕ್ರೀಡಾಪಟುಗಳಿಗೆ ಉತ್ತಮವಾದ ಸಮವಸ್ತ್ರಗಳನ್ನ ನೀಡಿದ್ದಾರೆ. ನಾವುಗಳು ಒಂದು ಶೂ ತೆಗೆದುಕೊಳ್ಳಲು ಪರದಾಡುವಂತಹ ಸ್ಥಿತಿಯಿತ್ತು. ಇಂದು ನಿಮ್ಮ ಪೋಷಕರು ಬೆಂಬಲ ನೀಡಿದ ಕಾರಣಕ್ಕೆ ಇಲ್ಲಿಗೆ ಬಂದಿದ್ದೀರಿ, ಅವಕಾಶ ಕಳೆದುಕೊಳ್ಳಬೇಡಿ ಎಂದು ಕಿವಿಮಾತು ಹೇಳಿದರು.

ಶ್ರಮ ಪಡದೆ ಯಾವುದೂ ದಕ್ಕುವುದಿಲ್ಲ. ಶ್ರಮ ಇದ್ದ ಕಡೆ ಫಲವಿದೆ. ಗಣಪತಿಯನ್ನು ಪೂಜಿಸಿದ ತಕ್ಷಣ ವಿದ್ಯೆ ಬರುವುದಿಲ್ಲ‌, ಹಗಲು ಹೊತ್ತು ಶ್ರಮ ಪಡಬೇಕು. ಈಗ ಸ್ಪರ್ದೆ ತಾಲ್ಲೂಕು, ಜಿಲ್ಲಾ, ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಇಲ್ಲ, ಅಂತರರಾಷ್ಟ್ರೀಯ ಮಟ್ಟದಲ್ಲಿದೆ. ನೀವೆಲ್ಲಾ ಗ್ಲೋಬಲ್ ಮಟ್ಟಕ್ಕೆ ಬೆಳೆಯಬೇಕು ಎಂದು ತಿಳಿಸಿದರು.

The post DK Sivakumar: ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಿ ಸೋತು ಮನೆಗೆ ಹೋಗಿದ್ದೆ: ಡಿ.ಕೆ.ಶಿವಕುಮಾರ್ appeared first on Ain Live News.

LEAVE A REPLY

Please enter your comment!
Please enter your name here